Ad imageAd image
- Advertisement -  - Advertisement -  - Advertisement - 

ನಾಗರ ಪಂಚಮಿ ದಿನದಂದೇ ಹಾವು ಕಚ್ಚಿ ಬಾಣಂತಿ ಸಾವು

Bharath Vaibhav
ನಾಗರ ಪಂಚಮಿ ದಿನದಂದೇ ಹಾವು ಕಚ್ಚಿ ಬಾಣಂತಿ ಸಾವು
WhatsApp Group Join Now
Telegram Group Join Now

ಶಿವಮೊಗ್ಗ : ಇಂದು ನಾಗರ ಪಂಚಮಿ. ರಾಜ್ಯಾಧ್ಯಂತ ಸಡಗರ, ಸಂಭ್ರಮದಿಂದ ಹುತ್ತಕ್ಕೆ ಹಾಲೆರೆದು ಪೂಜಿಸಲಾಗಿದೆ. ಇಂತಹ ನಾಗರ ಪಂಚಮಿ ದಿನದಂದೇ ಹಾವು ಕಚ್ಚಿ ಬಾಣಂತಿಯೊಬ್ಬರು ಸಾವನ್ನಪ್ಪಿರುವಂತ ಘಟನೆ ಸಾಗರ ತಾಲ್ಲೂಕಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಾಗರ ಪಂಚಮಿಯ ಇಂದಿನ ದಿನದಂದೇ ಬಾಣಂತಿಯಾಗಿದ್ದಂತ ರಂಜಿತಾ(22) ಎಂಬುವರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಅಂದಹಾಗೇ ರಂಜಿತಾ ಅವರು ಮೂರು ತಿಂಗಳ ಹಿಂದಷ್ಟೇ ಎರಡನೇ ಮಗುವಿಗೆ ಜನ್ಮ ನೀಡಿದ್ದರು. ಇಂದು ಹಾವು ಕಚ್ಚಿ ಸಾವನ್ನಪ್ಪಿದ್ದರಿಂದ ಇಬ್ಬರು ಮಕ್ಕಳು ತಾಯಿಯನ್ನು ಕಳೆದುಕೊಂಡಂತೆ ಆಗಿದೆ.

WhatsApp Group Join Now
Telegram Group Join Now
Share This Article
error: Content is protected !!