ಹೈದರಾಬಾದ್ : ಕೋರ್ಟ್ ಗೆ ತೆರಳುತ್ತಿದ್ದ ಬೆಂಗಳೂರಿನ ಬಿಜೆಪಿ ಮುಖಂಡರಾದ ಕಾಡುಗೋಡು ವೀರಸ್ವಾಮಿ ರೆಡ್ಡಿ ಹಾಗೂ ಪುತ್ರ ಪ್ರಶಾಂತ್ ರೆಡ್ಡಿಯನ್ನ ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ನಡೆದಿದೆ.
ಬಿಜೆಪಿ ಮುಖಂಡರಾದ ಕಾಡುಗೋಡು ವೀರಸ್ವಾಮಿ ರೆಡ್ಡಿ ಹಾಗೂ ಪುತ್ರ ಪ್ರಶಾಂತ್ ರೆಡ್ಡಿಯನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಈ ಕೊಲೆ ರಾಜ್ಯವನ್ನ ಬೆಚ್ಚಿ ಬೀಳಿಸಿದೆ.
ಚೆಕ್ ಬೌನ್ಸ್ ಪ್ರಕರಣ ಸಂಬಂಧ ಕೋರ್ಟ್ ಗೆ ತೆರಳುವಾಗ ಕಾಡುಗುಡಿಯ ವೀರಸ್ವಾಮಿ ಹಾಗೂ ಪುತ್ರ ಪ್ರಶಾಂತ್ ರನ್ನ ಕಿಡ್ನ್ಯಾಪ್ ಮಾಡಿ ಕೊಲೆ ಮಾಡಲಾಗಿದೆ. ವೈಯಕ್ತಿಕ ದ್ವೇಷಕ್ಕೆ ಈ ಹತ್ಯೆ ನಡೆದಿರಬಹುದೆಂದು ಶಂಕಿಸಲಾಗಿದೆ.




