ಬೀದರ್: ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯ ಕಮಲನಗರ ತಾಲೂಕಿನ ಠಾಣಾಕುಶನೂರ ಗ್ರಾಮದ ಕಂಟೆಪ್ಪ ಜಿರ್ಗೆ (65) ಮೃತರು. ಇವರು ಸಂಬಂಧಿಕರೊಂದಿಗೆ ಭಾನುವಾರ ಕುಂಭಮೇಳಕ್ಕೆ ತೆರಳಿದ್ದರು.
ಸೋಮವಾರ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದರು. ನಂತರ ಮರಳಿ ಉತ್ತರ ಪ್ರದೇಶದ ಕಾಶಿ ದೇವಸ್ಥಾನಕ್ಕೆ ತೆರಳಿದ್ದರು.
ಆದರೆ ಬುಧವಾರ ಬೆಳಗ್ಗೆ 11 ಗಂಟೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರ ಅಂತ್ಯಕ್ರಿಯೆ ಗುರುವಾರ ಸ್ವಗ್ರಾಮ ಠಾಣಾಕುಶನೂರದಲ್ಲಿ ನಡೆಯಲಿದೆ.