Ad imageAd image

ಚಿಂಚಲಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಮತಯಾಚನೆ

Bharath Vaibhav
WhatsApp Group Join Now
Telegram Group Join Now

ರಾಯಬಾಗ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ರಾಯಬಾಗ ವಿಧಾನಸಭೆ ಕ್ಷೇತ್ರದ ಚಿಂಚಲಿ ಪಟ್ಟಣದಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ  ಅಣ್ಣಾಸಾಹೇಬ ಜೊಲ್ಲೆ ಅವರ ಪರವಾಗಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆಯವರು ಪ್ರಚಾರ ಕೈಗೊಂಡು ಮತಯಾಚನೆ ಮಾಡಿದರು.

ದೇಶದಲ್ಲಿ ಬಡತನವನ್ನು ಸಂಪೂರ್ಣ ನಿರ್ಮೂಲನೆ ಮಾಡುವ ಸಂಪೂರ್ಣ ತಯಾರಿ ಮೋದಿಜಿ ಸರ್ಕಾರ ಮಾಡಿದೆ. ಇದಕ್ಕಾಗಿ ನಿವೆಲ್ಲರೂ ಬಿಜೆಪಿಯನ್ನು ಗೆಲ್ಲಿಸಿ ಮೋದಿಜಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಹಾಗೂ ಚಿಕ್ಕೋಡಿಗೆ ಶ್ರೀ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶ್ರೀ ಅರುಣ ಐಹೊಳೆ,ಶ್ರೀ ಅಂಕುಶ ಜಾಧವ,ಶ್ರೀ ಮಹಾದೇವ ಬೋರಗಾಂವೆ,ಶ್ರಿ ಸುಭಾಷ ಕೋರೆ, ಶ್ರೀ ನವೀನ ಪಟೇಕರಿ,ಶ್ರೀ ಪ್ರಥ್ವಿರಾಜ ಜಾಧವ,ಶ್ರೀ ರಾಮು ನಿಶನದಾರ,ಶ್ರೀ ಪ್ರಕಾಶ ಪಡವಲಕರ,ಸ್ಥಳೀಯ ಮುಖಂಡರು,ಗಣ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ರಾಜು ಮುಂಡೆ 

WhatsApp Group Join Now
Telegram Group Join Now
Share This Article
error: Content is protected !!