Ad imageAd image

ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ಬಿರುಸಿನ ಮತ ಪ್ರಚಾರ. ಇದು ಧರ್ಮ – ಅಧರ್ಮದ ನಡುವೆ ನಡೆಯುತ್ತಿರುವ ಯುದ್ಧ, ಸತ್ಯಕ್ಕೆ ಜಯ .ಎಸ್.ಬಾಲರಾಜ್

Bharath Vaibhav
ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ಬಿರುಸಿನ ಮತ ಪ್ರಚಾರ. ಇದು ಧರ್ಮ – ಅಧರ್ಮದ ನಡುವೆ ನಡೆಯುತ್ತಿರುವ ಯುದ್ಧ, ಸತ್ಯಕ್ಕೆ ಜಯ .ಎಸ್.ಬಾಲರಾಜ್
WhatsApp Group Join Now
Telegram Group Join Now

ಯಳಂದೂರು:-ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ಮತಯಾಚನೆ. ತಾಲೂಕಿನ ಯರಗಂಬಳ್ಳಿ,ಗುಂಬಳ್ಳಿ, ಗೂಳಿಪುರ,ಅಂಬಳೆ, ಕೆಂಪನಪುರ ಹಾಗೂ ವಿವಿಧ ಗ್ರಾಮಗಳಲ್ಲಿ ಬಿರುಸಿನ ಮತಯಾಚನೆ ಮಾಡಿದರು

ಬಿಜೆಪಿ ತಾಲ್ಲೂಕು ಮಂಡಲದ ಕಾರ್ಯಕರ್ತರು, ಮುಖಂಡರು ಗ್ರಾಮ ಪಂಚಾಯತಿ ಸದಸ್ಯರು ಮನೆ ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ಪರವಾಗಿ ಮತಯಾಚನೆ ಮಾಡಿದರು.

ಮತಯಾಚನೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು ಮಾತನಾಡಿ ಮಾನ್ಯ ಪ್ರಧಾನಿ ನರೇಂದ್ರ ಮೋದಿಜಿ ಅವರು ಹತ್ತು ವರ್ಷಗಳ ಕಾಲ ಉತ್ತಮ ಆಡಳಿತವನ್ನು ನೀಡಿದ್ದಾರೆ, ನಾನು ನಿಮ್ಮ ಕ್ಷೇತ್ರದವನು, ನಿಮ್ಮ ಮನೆ ಮಗನು, ನಿಮ್ಮ ಗ್ರಾಮದಲ್ಲಿ ಹುಟ್ಟಿ ಬೆಳೆದು ಈ ಮಟ್ಟಕ್ಕೆ ಬಂದಿದ್ದೇನೆ, ನಿಮ್ಮ ಸೇವೆ ಮಾಡಲು ನನಗೊಂದು ಅವಕಾಶ ಕೊಡಿ, ನಮ್ಮ ವಿರೋಧಿ ಕಾಂಗ್ರೆಸ್ ಪಕ್ಷ ಬಾಬಾ ಸಾಹೇಬ್ ರವರ ಸಮಾಧಿಗೆ ಜಾಗ ಕೊಡಲಿಲ್ಲ, ಬಾಬಾ ಸಾಹೇಬರಿಗೆ ಅಗೌರವವನ್ನು ತೋರಿದ್ದಾರೆ, ಕಾಂಗ್ರೆಸ್ ಪಕ್ಷ ದಲಿತರಿಗೆ ಅನ್ಯಾಯ ಮಾಡಿದೆ, ಎಸ್ಸಿ. ಎಸ್ಟಿ ಅನುದಾನವನ್ನ ಗ್ಯಾರಂಟಿಗಳಿಗೆ ಬಳಕೆ ಮಾಡಿಕೊಂಡು ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ.

ನರೇಂದ್ರ ಮೋದಿ ರವರು ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ಯನ್ನು ನೀಡಿದ್ದಾರೆ. ದೇಶದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ವಿಶೇಷವಾದ ಕಾಯ್ದೆಗಳನ್ನು ಜಾರಿ ಮಾಡಿದ್ದಾರೆ. ಆದ್ದರಿಂದ ಮತ್ತೊಮ್ಮೆ ಮೋದಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಆಗಾಗಿ ಈ ಚುನಾವಣೆ ಯಲ್ಲಿ ನನ್ನನ್ನು ಅತೀ ಹೆಚ್ಚು ಮತಗಳನ್ನ ನೀಡಿ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಮಂಡಲ ಅಧ್ಯಕ್ಷ ಅನಿಲ್, ಕಾರ್ಯದರ್ಶಿ ಕೆಂಪರಾಜು,ರೈತ ಮುರ್ಚಾ ಜಿಲ್ಲಾ ಪ್ರದಾನ ಕಾರ್ಯದರ್ಶಿ ಕೋಮಾರಣಪುರ ಚಂದ್ರು,ಚಾಮುಲ್ ಅಧ್ಯಕ್ಷ ನಾಗೇಂದ್ರ, ಮಾಜಿ ಮಂಡಲ ಅಧ್ಯಕ್ಷ ಮಹೇಶ್, ಮಾಜಿ ತಾಲ್ಲೂಕು ಪಂಚಾಯತಿ ಉಪಾಧ್ಯಕ್ಷ ರವೀಶ್ ಲೋಕೇಶ್,ಯರಗಂಬಳ್ಳಿ ಬಾಬು ಬಿಜೆಪಿ ಕಾರ್ಯಕರ್ತರು, ಮುಖಂಡರು ಹಾಗೂ ಸಾರ್ವಜನಿಕರು ಹಾಜರಿದ್ದರು.

ವರದಿ:ಸ್ವಾಮಿ ಬಳೇಪೇಟೆ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!