Ad imageAd image

10 ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ

Bharath Vaibhav
10 ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ
WhatsApp Group Join Now
Telegram Group Join Now

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯ ಮೇಜರ್ ಸರ್ಜರಿ ಮಾಡಲಾಗಿದೆ. 10 ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಈ ಸಂಬಂಧ 2024-25ರ ಸಂಘಟನಾ ಪರ್ವದ ರಾಜ್ಯ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ದೇಶಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದೆ. ಇದರ ಅಂಗವಾಗಿ ರಾಜ್ಯದಲ್ಲಿ 2ನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ ಎಂದಿದ್ದಾರೆ.

ರಾಜ್ಯ ಚುನಾವಣಾಧಿಕಾರಿಯಾದ ನಾನು ಈ ಕೆಳಕಂಡ ಜಿಲ್ಲಾಧ್ಯಕ್ಷರನ್ನು ಅಭಿನಂದಿಸುತ್ತಾ, ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುತ್ತಾ, ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸುವಂತೆ ಸೂಚಿಸಿದ್ದಾರೆ.

ಹೀಗಿದೆ 10 ಜಿಲ್ಲೆಯ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ಲೀಸ್ಟ್

ಮೈಸೂರು ಗ್ರಾಮಾಂತರ – ಕೆಎನ್ ಸುಬ್ಬಣ್ಣ

ಹಾಸನ- ಸಿದ್ದೇಶ್ ನಾಗೇಂದ್ರ

ಕೊಡಗು- ರವಿ ಕಾಳಪ್ಪ

ಉಡುಪಿ – ಕುತ್ಯಾರು ನವೀನ್ ಶೆಟ್ಟಿ

ಹಾವೇರಿ – ವಿರೂಪಾಕ್ಷಪ್ಪ ಬಳ್ಳಾರಿ

ದಾವಣಗೆರೆ- ಎನ್ ರಾಜಶೇಖರ

ಚಿತ್ರದುರ್ಗ- ಕೆ.ಟಿ ಕುಮಾರಸ್ವಾಮಿ

ತುಮಕೂರು – ಹೆಚ್ ಎಸ್ ರವಿಶಂಕರ್ (ಹೆಬ್ಬಾಕ)

ಮಧುಗಿರಿ- ಚಿದಾನಂದ ಗೌಡ

ಚಿಕ್ಕಬಳ್ಳಾಪುರ- ಎಸ್ ವಿ ರಾಮಚಂದ್ರ ಗೌಡ (ಸೀಕಲ್)

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!