Ad imageAd image
- Advertisement -  - Advertisement -  - Advertisement - 

ಬಿಎಸ್ ವೈ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೆ ಬಜೆಪಿ 25 ಸೀಟಿನಿಂದ 17 ಸೀಟಿಗೆ ಇಳಿದಿದೆ : ಈಶ್ವರಪ್ಪ 

Bharath Vaibhav
ಬಿಎಸ್ ವೈ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೆ ಬಜೆಪಿ 25 ಸೀಟಿನಿಂದ 17 ಸೀಟಿಗೆ ಇಳಿದಿದೆ : ಈಶ್ವರಪ್ಪ 
ks eshwarappa
WhatsApp Group Join Now
Telegram Group Join Now

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರರ ವಿರುದ್ಧ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ಮುಂದುವರೆದಿದ್ದು, ಇದೀಗ ಯಡಿಯೂರಪ್ಪ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೆ ಲೋಕಸಭೆ ಚುನಾವಣೆಯಲ್ಲಿ ಬಜೆಪಿ 25 ಸೀಟಿನಿಂದ 17 ಸೀಟಿಗೆ ಇಳಿದಿದೆ ಎಂದು ಟೀಕಿಸಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯ ವೇಳೆಗೆ ವಿಜಯೇಂದ್ರರನ್ನು ಪಕ್ಷದ ಅಧ್ಯಕ್ಷರಾಗಿ ಮಾಡಿದ್ದು, ಎಲ್ಲರಿಗೂ ಅಚ್ಚರಿ ಉಂಟುಮಾಡಿತ್ತು. ಯಡಿಯೂರಪ್ಪ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೆ ಲೋಕಸಭೆ ಚುನಾವಣೆಯಲ್ಲಿ ಬಜೆಪಿ 25 ಸೀಟಿನಿಂದ 17 ಸೀಟಿಗೆ ಇಳಿದಿದೆ ಎಂದು ಟೀಕಿಸಿದರು.

ಈ ಹಿಂದೆ ನಮ್ಮ ಪಕ್ಷದಲ್ಲಿ ಸಾಮೂಹಿಕ ನಾಯಕತ್ವ ಇತ್ತು. ಸಾಮೂಹಿಕ ನಾಯಕತ್ವದಲ್ಲಿಯೇ ಕೋರ್ ಕಮಿಟಿಯಲ್ಲಿ ಚರ್ಚೆ ನಡೆಯುತ್ತಿತ್ತು. ಯಡಿಯೂರಪ್ಪ‌ ಸ್ವಜನ ಪಕ್ಷಪಾತ ಮಾಡಿದ್ದಾರೆ. ಬಿಜೆಪಿಯಲ್ಲಿ ಹಿಂದೂತ್ವವೇ ಹೊರಟು ಹೋಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಳಗಾವಿಯಲ್ಲಿ 12 ಜನ ಬಿಜೆಪಿ ನಾಯಕರು ಸಭೆ ನಡೆಸಿದ ವಿಚಾರವಾಗಿ ಮಾತನಾಡಿದ ಅವರು, ನಿನ್ನೆ ಸಭೆ ನಡೆಸಿದವರು ಸಂಘಟನೆಯಲ್ಲಿದ್ದು, ಪಕ್ಷ ಕಟ್ಟಿದವರು. ಇವರು ಏನೇನು ನೋವು ಅನುಭವಿಸುದ್ದಾರೆ ಎಂಬುದನ್ನು ಹೇಳಿಲ್ಲ. ಪಾದಯಾತ್ರೆ ನಡೆಸುವುದಾಗಿ ಹೇಳಿದ್ದಾರೆ.

ಸಭೆ ನಡೆಸಿದವರು ಕೇವಲ ಹನ್ನೆರಡು ಜನ ಮಾತ್ರ ಅಂತ ಕೇಂದ್ರದ ನಾಯಕರು ತಾತ್ಸಾರ ಮಾಡಬಾರದು. ಅವರು ಪಾದಯಾತ್ರೆ ನಡೆಸಿದರೆ ಗಲ್ಲಿ ಗಲ್ಲಿಗಳಲ್ಲಿ ಪಾರ್ಟಿ ಎರಡಾಗುತ್ತದೆ ಎಂದರು.

 

 

WhatsApp Group Join Now
Telegram Group Join Now
Share This Article
error: Content is protected !!