Ad imageAd image

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ ಮಾಡುತ್ತೇವೆ : ಸಿದ್ಧರಾಮಯ್ಯ 

Bharath Vaibhav
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ ಮಾಡುತ್ತೇವೆ : ಸಿದ್ಧರಾಮಯ್ಯ 
WhatsApp Group Join Now
Telegram Group Join Now

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಧೂಳೀಪಟ ಮಾಡುತ್ತೇವೆ ಎಂದು ಪರಿಷತ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ‘ಮೋದಿ ಕಿ ಗ್ಯಾರಂಟಿ’ ಎಂದು ಘೋಷಿಸಿದರು.

ಗ್ಯಾರಂಟಿಗಳನ್ನು ವಿರೋಧಿಸಿದ ಬಿಜೆಪಿಯವರು ಚುನಾವಣೆಯನ್ನು ಎದುರಿಸಿದರು. 1980ರಲ್ಲಿ ಬಿಜೆಪಿ ಪ್ರಾರಂಭವಾದಾಗ ಕೇವಲ 2 ಸ್ಥಾನಗಳನ್ನು ಪಡೆದಿತ್ತು. ಆದರೆ ಈ ಲೋಕಸಭಾ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಕಡಿಮೆ ಸ್ಥಾನವನ್ನು ಪಡೆದಿದ್ದಾರೆ ಎಂದು ಸಿಎಂ ಹೇಳಿದರು.

ಕರ್ನಾಟಕದ ಇತಿಹಾಸವನ್ನು ಅವಲೋಕಿಸಿದರೆ, ಬಿಜೆಪಿಯನ್ನು ಜನರು ಆಶೀರ್ವಾದವೇ ಮಾಡಿಲ್ಲ. ನಾವು ಕಳೆದ ಬಾರಿ ಕಡಿಮೆ ಗೆದ್ದಿದ್ದರೂ , ಈ ಬಾರಿ ಬಹುಮತ ಸಾಧಿಸಿದ್ದೇವೆ, ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ.

ಬಿಜೆಪಿಯವರು 2008 ರಿಂದ 2013 , 2019 ರಿಂದ 2023 ರವರೆಗೆ ಅಧಿಕಾರ ನಡೆಸಿದ್ದೀರಿ. ಬಿಜೆಪಿಯವರು ಒಮ್ಮೆಯೂ ಬಹುಮತ ಪಡೆಯದೆ ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.

ಬಿಜೆಪಿಯವರು ತಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿ, ಅದರಲ್ಲಿ ಶೇ10 ರಷ್ಟು ಈಡೇರಿಸಲು ಸಾಧ್ಯವಾಗಲಿಲ್ಲ. ಸದನದಲ್ಲಿ ಯಡಿಯೂರಪ್ಪನವರು ಭರವಸೆಗಳನ್ನು ಈಡೇರಿಸಲು, ಸಾಲ ಮನ್ನಾ ಮಾಡಲು ನಾವು ನೋಟ್ ಪ್ರಿಂಟ್ ಮಷಿನ್ ಇಟ್ಟಿಲ್ಲ ಎಂದಿದ್ದರು ಎಂದು ಸಿದ್ದರಾಮಯ್ಯ ಕಿಡಿ ಕಾರಿದರು.

WhatsApp Group Join Now
Telegram Group Join Now
Share This Article
error: Content is protected !!