Ad imageAd image

ಕಾಂಗ್ರೆಸ್ ಅಭ್ಯರ್ಥಿ ಪರ ಹಂಚಿಕೆ ಮಾಡುತ್ತಿದ್ದ ಐವರನ್ನು ಪೊಲೀಸರಿಗೆ ಒಪ್ಪಿಸಿದ ಬಿಜೆಪಿ ಕಾರ್ಯಕರ್ತರು

Bharath Vaibhav
ಕಾಂಗ್ರೆಸ್ ಅಭ್ಯರ್ಥಿ ಪರ ಹಂಚಿಕೆ ಮಾಡುತ್ತಿದ್ದ ಐವರನ್ನು ಪೊಲೀಸರಿಗೆ ಒಪ್ಪಿಸಿದ ಬಿಜೆಪಿ ಕಾರ್ಯಕರ್ತರು
WhatsApp Group Join Now
Telegram Group Join Now

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಹಣ ಹಂಚಿಕೆ ಮಾಡುತ್ತಿದ್ದ ಆರೋಪದ ಮೇಲೆ ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಐವರನ್ನು ಹಿಡಿದ ಬಿಜೆಪಿ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಂಕಲಗಿ ಗ್ರಾಮದ ಮನೆ ಮನೆಗೆ ತೆರಳಿ ಒಂದು ಸಾವಿರ ರೂಪಾಯಿ ಹಂಚುತ್ತಿದ್ದ ವೇಳೆ ಹಣದ ಸಮೇತ ನಾಲ್ವರು ಬೆಂಬಲಿಗರು ಸಿಕ್ಕಿ ಬಿದ್ದಿದ್ದಾರೆ.

ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ಬರುತ್ತಿದ್ದಂತೆ ಹಣ ಹಂಚುತ್ತಿದ್ದವರು ಪರಾರಿಯಾಗಲು ಯತ್ನಿಸಿದ್ದಾರೆ. ನಂತರ ಸಿನಿಮೀಯ ರೀತಿಯಲ್ಲಿ ಅವರನ್ನು ಹಿಡಿದು ಮತದಾರರಿಗೆ ಹಂಚಲು ತಂದಿದ್ದ 20 ಲಕ್ಷ ರೂಪಾಯಿ ಹಣ ಮತ್ತು ಐವರನ್ನು ಹಿಡಿದು ಬಿಜೆಪಿ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಹಾಂತೇಶ ಕಡಾಡಿ. ಭದ್ರಾವತಿ ಮೂಲದ ಇಬ್ಬರು ಯುವಕರು, ಹರ್ಷ ಶುಗರ್ಸ್ ಕಾರ್ಖಾನೆಯ ಇಬ್ಬರು ಸಿಬ್ಬಂದಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

WhatsApp Group Join Now
Telegram Group Join Now
Share This Article
error: Content is protected !!