Ad imageAd image

ತಿರುಪತಿಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇ-ಮೇಲ್

Bharath Vaibhav
ತಿರುಪತಿಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇ-ಮೇಲ್
WhatsApp Group Join Now
Telegram Group Join Now

ತಿರುಪತಿ : ತಿರುಪತಿಯ ರೇಣಿಗುಂಟಾ ವಿಮಾನ ನಿಲ್ದಾಣಕ್ಕೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇ-ಮೇಲ್ ಮಾಡಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಅಪರಿಚಿತ ವ್ಯಕ್ತಿಗಳು ಹಿಂದಿಯಲ್ಲಿ ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ.ಈ ಕುರಿತು ತಿರುಪತಿ ವಿಮಾನ ನಿಲ್ದಾಣದ ಸಿಐಎಸ್‌ಎಫ್‌ ಅಪರಾಧ ಗುಪ್ತಚರ ವಿಭಾಗದ ಎಸ್‌ಎಸ್‌ ನಾಗರಾಜು ಎರ್ಪೇಡು ಅವರಿಗೆ ದೂರು ನೀಡಲಾಗಿದೆ. ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ತಿರುಮಲ ದೇಗುಲದಲ್ಲಿರುವ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ದೇಶ ವಿದೇಶಗಳಿಂದಲೂ ಭಕ್ತರು ತಿರುಪತಿಗೆ ಬರುತ್ತಾರೆ. ರೇಣಿಗುಂಟಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಕ್ತರು ತಿರುಪತಿಯಿಂದ ರಸ್ತೆ ಮಾರ್ಗವಾಗಿ ತಿರುಮಲ ತಲುಪಲಿದ್ದಾರೆ.

ಬಹುತೇಕ ಸೆಲೆಬ್ರಿಟಿಗಳು, ರಾಜಕಾರಣಿಗಳು, ವಿಐಪಿಗಳು ಮತ್ತು ವಿವಿಐಪಿಗಳು ತಿರುಪತಿ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಾರೆ. ಅಲ್ಲಿಂದ ತಿರುಮಲಕ್ಕೆ ತೆರಳಿ ಸ್ವಾಮಿಯ ದರ್ಶನ ಪಡೆಯುತ್ತಾರೆ.

ಇತ್ತೀಚೆಗೆ ತಿರುಮಲ ಲಡ್ಡುವಿನಲ್ಲಿ ಕಲಬೆರಕೆ ತುಪ್ಪದ ವಿಚಾರ ದೇಶಾದ್ಯಂತ ಸಂಚಲನ ಮೂಡಿಸಿದೆ. ಸುಪ್ರೀಂ ಕೋರ್ಟ್ ಕೂಡ ಸ್ಪಂದಿಸಿ ತನಿಖೆಗೆ ಕೇಂದ್ರಕ್ಕೆ ಆದೇಶ ನೀಡಿದೆ ಎಂದು ಗೊತ್ತಾಗಿದೆ.

ಇಂತಹ ಸೂಕ್ಷ್ಮ ವಿಚಾರಗಳ ಬಗ್ಗೆ ತನಿಖೆ ನಡೆಸಿದ ಬಳಿಕವಷ್ಟೇ ವದಂತಿಗಳನ್ನು ಹಬ್ಬಿಸಬೇಡಿ ಮತ್ತು ಜನರಿಗೆ ಸತ್ಯವನ್ನು ತಿಳಿಸುವಂತೆ ಸುಪ್ರೀಂ ಕೋರ್ಟ್ ಪೀಠವು ಎಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!