Ad imageAd image

ಎರಡೂವರೆ ವರ್ಷ ಬಳಿಕ ಸಂಪುಟ ಪುನಾರಚನೆ : ಕೃಷ್ಣ ಬೈರೇಗೌಡ 

Bharath Vaibhav
ಎರಡೂವರೆ ವರ್ಷ ಬಳಿಕ ಸಂಪುಟ ಪುನಾರಚನೆ : ಕೃಷ್ಣ ಬೈರೇಗೌಡ 
krishna byre gowda
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದ್ದು, ನವೆಂಬರ್ ಬಂದರೆ ರಾಜ ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ಪೂರೈಸುತ್ತದೆ.

ಇದರ ಬೆನ್ನಲ್ಲೆ, ಸಂಪುಟ ಪುನರ್ ರಚನೆ ಬಗ್ಗೆ ಕೂಡ ಹಲವು ನಾಯಕರಿಂದ ಕೂಗು ಕೇಳಿ ಬರುತ್ತಿದ್ದು, ಇದರ ಮಧ್ಯ ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಚಿವ ಕೃಷ್ಣ ಬೈರೇಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ರೆಡಿ ಇದ್ದೇನೆ. ಎರಡುವರೆ ವರ್ಷದ ಬಳಿಕ ಸಂಪುಟ ಪುನರ್ ರಚನೆ ಆಗುತ್ತೆ. ಸರ್ಕಾರ ಬಂದಾಗಲೇ ಈ ನಿರ್ಧಾರ ಆಗಿತ್ತು, ಸಚಿವರಾಗಲು ಅರ್ಹತೆ ಇರುವವರಿಗೆ ಅವಕಾಶ ಸಿಗಬೇಕು.

ನಾಯಕತ್ವ ಬದಲಾವಣೆಯ ಬಗ್ಗೆ ಹೈಕಮಾತ ತೀರ್ಮಾನಿಸುತ್ತದೆ. ಸಂಪುಟ ಪುನರು ರಚನೆಗೂ ನಾಯಕತ್ವ ಬದಲಾವಣೆಗೂ ಸಂಬಂಧವಿಲ್ಲ ಎಂದರು.

ಪಕ್ಷ ನನಗೆ ಮೂರು ಬಾರಿ ಸಚಿವ ಸ್ಥಾನವನ್ನು ನೀಡಿದೆ. ಅರ್ಹತೆ ಮೀರಿ ನನಗೆ ಪಕ್ಷ ಅವಕಾಶ ಕೊಟ್ಟಿದೆ ಹೈ ಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ತಯಾರಿದ್ದೇನೆ. ಸಚಿವ ಸ್ಥಾನದಿಂದ ನಾನು ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ. ಅವಕಾಶದ ವಿಷಯದಲ್ಲಿ ನನಗೆ ಹೊಟ್ಟೆ ತುಂಬಿದೆ ಆದರೆ ಕೆಲಸದಲ್ಲಿ ತೃಪ್ತಿ ಇಲ್ಲ ಅವಕಾಶ ವಿಚಾರದಲ್ಲಿ ನನಗೆ ಸಂತೃಪ್ತಿ ಇದೆ.

ಸಚಿವ ಸ್ಥಾನದ ತ್ಯಾಗಕ್ಕೆ ಸಿದ್ಧನಿದ್ದೇನೆ ಪಕ್ಷದನಿಗೆ ಎಲ್ಲವನ್ನು ನೀಡಿದೆ ಅರ್ಹತೆ ಕುಮೆರಿ ಅವಕಾಶ ನೀಡಿದೆ ಪಕ್ಷ ನನನ್ನು ಗುರುತಿಸಿ ಕೆಲಸ ಮಾಡಲು ಸಾಕಷ್ಟು ಅವಕಾಶ ನೀಡಿದೆ. ಅಗತ್ಯ ಬಿದ್ದರೆ ಸಚಿವ ಸ್ಥಾನದ ತ್ಯಾಗಕ್ಕೂ ಸಿದ್ಧನಿದ್ದೇನೆ ಎಂದು ತಿಳಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!