ಬೆಂಗಳೂರು: ಬ್ಯಾಡ್ಮಿಂಟನ್ ಆಟಗಾರರಾದ ಲಕ್ಷ್ಯ ಸೇನ್ ಮತ್ತು ಅವರ ಸಹೋದರ ಚಿರಾಗ್ ಸೇನ್ ಅವರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.
ಬ್ಯಾಡ್ಮಿಂಟನ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಮತ್ತು ಸರ್ಕಾರದಿಂದ ಪ್ರಯೋಜನಗಳನ್ನು ಪಡೆಯುವ ಸಲುವಾಗಿ ಅವರ ಪೋಷಕರು ಅವರ ಜನನ ಪ್ರಮಾಣಪತ್ರಗಳನ್ನು ಬದಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಲಕ್ಷ್ಯ ಸೇನ್ ಅವರು ಅರ್ಜುನ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಲಕ್ಷ್ಯ ಮತ್ತು ಚಿರಾಗ್ ಅವರ ತಂದೆ ಪ್ರಕಾಶ್ ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ತರಬೇತುದಾರರಾಗಿ ಕೆಲಸ ಮಾಡುತ್ತಾರೆ ಮತ್ತು ಅವರ ತಾಯಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ನ ಉದ್ಯೋಗಿಯಾಗಿದ್ದಾರೆ.
2022 ರಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ನಾಗರಾಜ ಎಂಜಿ ಎಂಬವರು ಸಲ್ಲಿಸಿದ ಖಾಸಗಿ ದೂರಿನ ಆಧಾರದ ಮೇಲೆ ಅವರ ವಿರುದ್ಧ ದಾಖಲಿಸಲಾದ ದೂರಿನ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಆರೋಪಿಗಳು ಸಲ್ಲಿಸಿದ ಮೂರು ಅರ್ಜಿಗಳನ್ನು ನ್ಯಾಯಮೂರ್ತಿ ಎಂಜಿ ಉಮಾ ವಜಾಗೊಳಿಸಿದ್ದಾರೆ.
ನ್ಯಾಯಾಲಯದ ಮುಂದೆ ಸಾಕಷ್ಟು ಸಾಕ್ಷಿಗಳಿವೆ, ಅವು ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ಅಡಿಯಲ್ಲಿ ಪಡೆದ ದಾಖಲೆಗಳಾಗಿವೆ. ಇಂತಹ ಸಂದರ್ಭಗಳಲ್ಲಿ, ಅರ್ಜಿಗಳನ್ನು ಸ್ವೀಕರಿಸಲು ನನಗೆ ಯಾವುದೇ ಕಾರಣ ಸಿಗುತ್ತಿಲ್ಲ ಎಂದು ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸುತ್ತಾ ನ್ಯಾಯಮೂರ್ತಿ ಉಮಾ ತಿಳಿಸಿದ್ದಾರೆ.




