ಇಲಕಲ್: ಸಜ್ಜನ್ ವಿದ್ಯಾ ವರ್ಧಕ ಸಂಘದ ಅಡಿಯಲ್ಲಿ ನಡೆಯುವ ಸಜ್ಜನ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಒಂದು ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವಾಧ್ಯಕ್ಷರಾದ ಸಿ ಎಂ, ಸಜ್ಜನ್, ಅಧ್ಯಕ್ಷರಾದ ಎಸ್ ಆರ್,ಕoಪ್ಲಿ, ಕಾರ್ಯದರ್ಶಿಗಳು ಮಹಾಂತ ಪ್ರಭು ಸಜ್ಜನ್,ಸಂಘದ ಕಾರ್ಯಕಾರಿ ಮಂಡಳಿಯ ಸದಸ್ಯರು, ಗೌರವ ಸದಸ್ಯರು ಹಾಗೂ ಆಡಳಿತಾಧಿಕಾರಿಗಳಾದ ಕೆ ಡಿ ವಂದಕುದುರೆ, ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾದ ಬಿ ಎಂ ಸೂಡಿ, ಕಾರ್ಯದರ್ಶಿಗಳಾದ ಎಸ್ ಎಮ್, ಸಜ್ಜನ್ ಪ್ರಾಥಮಿಕ ವಿಭಾಗದ ಮುಖ್ಯ ಗುರುಗಳಾದ ಆರ್ ಪಿ ಚೆನ್ನಗೌಡರ್, ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯರಾದ ಎಂ ಎಸ್ ಸಜ್ಜನ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯನೀಯರಾದ ಶ್ರೀಮತಿ ಆರ್ ಆರ್ ಕುಲಕರ್ಣಿ ಹಾಗೂ ಸಂಸ್ಥೆಯ ಎಲ್ಲಾ ಶಿಕ್ಷಕರುಂದದವರು ಹಾಗೂ ಮುದ್ದು ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಇಲ್ಕಲ್ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಾರ್ಗಿಲ್ ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಿದ್ದರು.




