Ad imageAd image

ಹೃದಯಾಘಾತದಿಂದ 7ನೇ ತರಗತಿ ವಿದ್ಯಾರ್ಥಿ ಸಾವು

Bharath Vaibhav
ಹೃದಯಾಘಾತದಿಂದ 7ನೇ ತರಗತಿ ವಿದ್ಯಾರ್ಥಿ ಸಾವು
WhatsApp Group Join Now
Telegram Group Join Now

ರಾಯಚೂರು: ತರಗತಿಯಲ್ಲಿ ಪಾಠ ಕೇಳುತ್ತಿದ್ದಾಗಲೇ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ತರುಣ್ ಅತ್ತನೂರು (14) ಮೃತ ದುರ್ದೈವಿ. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಅತ್ತನೂರು ಗ್ರಾಮದಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕ ಕ್ಲಾಸ್ ರೂಂ ನಲ್ಲಿಯೇ ಹೃದಯಾಘಾತಕ್ಕೀಡಾಗಿದ್ದಾನೆ.

ಪಾಠ ಕೇಳುತ್ತಿದ್ದ ತರುಣ್ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಶಿಕ್ಷಕರು ಆತನನ್ನು ಸಿರಿವಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗೆಂದು ರಾಯಚೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಬಾಲಕ ಕೊನೆಯುಸಿರೆಳೆದಿದ್ದಾನೆ. ಹೃದಯಾಘಾತದಿಂದ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.ಸಿರಿವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!