Ad imageAd image

ಸಿಎಂ ಮುಸ್ಲಿಮರ ಓಲೈಕೆಗಾಗಿ ರಾಜ್ಯವನ್ನು ಮಿನಿ ಪಾಕಿಸ್ತಾನವಾಗಿಸಲು ಮುಂದಾಗಿದ್ದಾರೆ : ಆರ್ ಅಶೋಕ್ 

Bharath Vaibhav
ಸಿಎಂ ಮುಸ್ಲಿಮರ ಓಲೈಕೆಗಾಗಿ ರಾಜ್ಯವನ್ನು ಮಿನಿ ಪಾಕಿಸ್ತಾನವಾಗಿಸಲು ಮುಂದಾಗಿದ್ದಾರೆ : ಆರ್ ಅಶೋಕ್ 
R ASHOK
WhatsApp Group Join Now
Telegram Group Join Now

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಮುಸ್ಲಿಮರ ಓಲೈಕೆಗಾಗಿ ಕರ್ನಾಟಕವನ್ನು ಮಿನಿ ಪಾಕಿಸ್ತಾನವಾಗಿಸಲು ಮುಂದಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿಯಲ್ಲಿ ನಡೆದ ಬಿಜೆಪಿ ಜನಾಕ್ರೋಶ ಸಭೆಯಲ್ಲಿ ಮಾತನಾಡಿದ ಅವರು, ಇದು ಬಿಜೆಪಿಯ ಆಕ್ರೋಶದ ಯಾತ್ರೆಯಲ್ಲ, ಜನರ ಆಕ್ರೋಶದ ಯಾತ್ರೆ.ಬೆಲೆ ಏರಿಕೆಯಿಂದಾಗಿ ಜನರಿಗೆ ತೊಂದರೆಯಾಗಿರುವುದರಿಂದ ಅವರಿಗಾಗಿ ಬಿಜೆಪಿ ಹೋರಾಟ ಮಾಡುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಪಾಕಿಸ್ತಾನ ಮಾಡಲು ಮುಂದಾಗಿದ್ದಾರೆ. ಮುಸಲ್ಮಾನರು ನಂ.1 ಎಂದು ಆಗಲು ವಿದೇಶ ಕೈವಾಡ ಇದೆಯೇ ಎಂಬ ಅನುಮಾನ ಬಂದಿದೆ.

ಮುಸ್ಲಿಮರ ಓಲೈಕೆಗಾಗಿ ಎಲ್ಲ ಜಾತಿಗಳನ್ನು ಒಡೆದುಹಾಕಿದ್ದಾರೆ. ಈ ಮೂಲಕ ಮಿನಿ ಪಾಕಿಸ್ತಾನ ಸೃಷ್ಟಿಸುತ್ತಿದ್ದಾರೆ. ಭಾರತವನ್ನು ಪಾಕಿಸ್ತಾನ ಮಾಡುತ್ತೇವೆಂದು ಕೆಲವು ಭಯೋತ್ಪಾದಕರು ಪತ್ರದಲ್ಲಿ ಬರೆದು ಹಂಚಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯನವರ ಕುರ್ಚಿಗೆ ನವೆಂಬರ್‌ನಲ್ಲಿ ಬಾಂಬ್‌ ಫಿಕ್ಸ್‌ ಆಗಿದೆ. ಅವರು ನಿರ್ಗಮಿಸುವುದರಿಂದಲೇ ಈ ರೀತಿ ಮಾಡುತ್ತಿದ್ದಾರೆ.

ರಾಜ್ಯದ ಬಡವರ ಮೇಲೆ ತೆರಿಗೆಯ ದಾಳಿ ಮಾಡುತ್ತಿದ್ದಾರೆ. ಕರ್ನಾಟಕ ಹಾಗೂ ತೆಲಂಗಾಣ ಕೇಂದ್ರ ಕಾಂಗ್ರೆಸ್‌ನ ಎಟಿಎಂ ಆಗಿದೆ. ಇದು ಕುರ್ಚಿ ಕಿತ್ತುಕೊಳ್ಳಲು ನಡೆಯುತ್ತಿರುವ ರಾಜಕೀಯ ಎಂದರು.

ರಾಜ್ಯದಲ್ಲಿ ಗೃಹ ಸಚಿವರೇ ಇಲ್ಲ. ಎಷ್ಟೇ ಅಪರಾಧ ನಡೆದರೂ ಇದು ಸಾಮಾನ್ಯ ಎಂದು ಡಾ.ಜಿ.ಪರಮೇಶ್ವರ್‌ ಹೇಳುತ್ತಾರೆ. ಮುಂದಿನ ಸಲ ಅಧಿಕಾರಕ್ಕೆ ಬರುವುದಿಲ್ಲ ಎಂದು ಕಾಂಗ್ರೆಸ್‌ ನಾಯಕರಿಗೆ ಗೊತ್ತಾಗಿದೆ.

ಹಾಲು, ಆಲ್ಕೋಹಾಲ್‌ ಹಾಗೂ ಡೆತ್‌ ಸರ್ಟಿಫಿಕೇಟ್‌ಗೂ ದರ ಏರಿಸಿದ್ದಾರೆ. ಕಸಕ್ಕೂ ತೆರಿಗೆ ಹಾಕಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಕಸದ ಪ್ರಮಾಣ ಲೆಕ್ಕ ಹಾಕಿ ತೆರಿಗೆ ಹಾಕುತ್ತಾರೆ. ವಾಹನ ಪಾರ್ಕಿಂಗ್‌ ಮಾಡಿದರೂ ತೆರಿಗೆ ವಿಧಿಸುತ್ತಾರೆ ಎಂದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರರು ರೂಪಿಸಿದ್ದ ಪತ್ರಿಕಾ ಸಂಸ್ಥೆಗೆ 50 ಲಕ್ಷ ರೂ. ಬಂಡವಾಳ ಹೂಡಿ, ಇಡೀ 7,500 ಕೋಟಿ ರೂ. ಹಣವನ್ನು ಕಾಂಗ್ರೆಸ್‌ನ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಲೂಟಿ ಮಾಡಿದ್ದಾರೆ.

ಇದು ಕೋರ್ಟ್‌ ಆದೇಶದ ಪ್ರಕಾರ ನಡೆದಿರುವ ತನಿಖೆ. ಆದರೆ ಕಾಂಗ್ರೆಸ್‌ ನಾಯಕರು ಇದರ ವಿರುದ್ಧ ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಇಂತಹ ಭ್ರಷ್ಟಾಚಾರ ಮಾಡಿರುವ ಕಾಂಗ್ರೆಸ್‌ ಯಾವ ನೈತಿಕೆಯ ಮೇಲೆ ಬಿಜೆಪಿಯ ಮೇಲೆ ಆರೋಪ ಮಾಡುತ್ತಿದೆ? ಎಂದು ಪ್ರಶ್ನೆ ಮಾಡಿದರು.

 

 

WhatsApp Group Join Now
Telegram Group Join Now
Share This Article
error: Content is protected !!