Ad imageAd image

ಸಿಎಂ – ಮಾಜಿ ಸಿಎಂಗೆ ಇಂದು ಬಿಗ್ ಡೇ : ತೀರ್ಪಿನತ್ತ ಎಲ್ಲರ ಚಿತ್ತ 

Bharath Vaibhav
ಸಿಎಂ – ಮಾಜಿ ಸಿಎಂಗೆ ಇಂದು ಬಿಗ್ ಡೇ : ತೀರ್ಪಿನತ್ತ ಎಲ್ಲರ ಚಿತ್ತ 
WhatsApp Group Join Now
Telegram Group Join Now

ಬೆಂಗಳೂರು : ಮುಡಾ ಕೇಸ್​​​ನ ಆರೋಪದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಕರಣದ ತನಿಖೆ ಸಿಬಿಐಗೆ ವಹಿಸುವ ವಿಚಾರ ಹಾಗೂ ಮಾಜಿ ಸಿಎಂ ಬಿ.ಎಸ್​​​​​.ಯಡಿಯೂರಪ್ಪ ತಮ್ಮ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯ ಇಂದು ತೀರ್ಪು ಹೊರಬೀಳಲಿದೆ.

ಮುಡಾ ಹಗರಣದ ತನಿಖೆಯನ್ನು ಲೋಕಾಯುಕ್ತ ಪೊಲೀಸರಿಂದ ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕೋರ್ಟ್​​ಗೆ ಸಲ್ಲಿಸಿದ್ದ ರಿಟ್​​​ ಅರ್ಜಿಯ ವಿಚಾರಣೆ ನಡೆಸಿರುವ ಧಾರವಾಡ ಹೈಕೋರ್ಟ್​ ಪೀಠವು ತೀರ್ಪನ್ನು ಕಾಯ್ದಿರಿಸಿತ್ತು.

ಇತ್ತ ಮಾಜಿ ಸಿಎಂ ಯಡಿಯೂರಪ್ಪ ಮನೆಗೆ ನೆರವು ಕೋರಿ ಬಂದಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಸಂಬಂಧದ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಯಡಿಯೂರಪ್ಪ ವಿರುದ್ಧ ಈಗಾಗಲೇ ಸಿಐಡಿ ಪೊಲೀಸರು ದೋಷಾರೋಪಪಟ್ಟಿ ಸಲ್ಲಿಸಿದ್ದರು.

ಈವರೆಗೆ ಖುದ್ದು ಹಾಜರಾತಿಯಿಂದ ಪ್ರಕರಣದಲ್ಲಿ ಯಡಿಯೂರಪ್ಪ ಅವರಿಗೆ ವಿನಾಯಿತಿಯನ್ನು ಕೋರ್ಟ್​ ನೀಡಿತ್ತು. ಈವರೆಗೂ ಬಂಧನದಿಂದಲೂ ರಕ್ಷಣೆ ಸಿಕ್ಕಿದ್ದು, ನಿರೀಕ್ಷಣಾ ಜಾಮೀನು ಬಗ್ಗೆಯೂ ಹೈಕೋರ್ಟ್​ ಇಂದು ತೀರ್ಮಾನಿಸಲಿದೆ.

ಸಿಎಂ ಸಿದ್ದರಾಮಯ್ಯ ಮುಡಾ ಕೇಸ್ ಹಾಗೂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಸಂಬಂಧ ಇಂದು ಬೆಳಗ್ಗೆ 10-30ಕ್ಕೆ ಕೋರ್ಟ್ ತೀರ್ಪು ನೀಡಲಿದ್ದು ಭವಿಷ್ಯ ನಿರ್ಧಾರವಾಗಲಿದೆ. ನ್ಯಾ.ನಾಗಪ್ರಸನ್ನ ಅವರ ಪೀಠವು ಇಬ್ಬರ ಪ್ರಕರಣದ ತೀರ್ಪನ್ನು ಪ್ರಕಟಿಸಲಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!