Ad imageAd image

ಕೋವಿಡ್ ನಂತರ ಹಠಾತ್ ಸಾವು ಪ್ರಕರಣ : ಸಂಶೋಧನೆ ನಡೆಸಿ ವರದಿ ನೀಡಲು ಸಿಎಂ ಸೂಚನೆ 

Bharath Vaibhav
ಕೋವಿಡ್ ನಂತರ ಹಠಾತ್ ಸಾವು ಪ್ರಕರಣ : ಸಂಶೋಧನೆ ನಡೆಸಿ ವರದಿ ನೀಡಲು ಸಿಎಂ ಸೂಚನೆ 
siddaramaiah
WhatsApp Group Join Now
Telegram Group Join Now

ಬೆಂಗಳೂರು: ಕೋವಿಡ್ ನಂತರ ರಾಜ್ಯದಲ್ಲಿ ಸಂಭವಿಸುತ್ತಿರುವ ಹೃದಯಘಾತ ಸೇರಿದಂತೆ ಹಠಾತ್ ಸಾವುಗಳು ಸಂಭವಿಸದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್ ನಂತರ ಸಂಭವಿಸುತ್ತಿರುವ ಹೃದಯಾಘಾತ ಹಾಗೂ ಹೃದಯಸ್ಥಂಭನ, ಮೆದುಳು ಸಂಬಂಧಿ, ನರಸಂಬಂಧಿ ಮತ್ತಿತರ ಕಾರಣಗಳಿಂದಾಗಿ ಯುವಜನರು ಹಠಾತ್ ಸಾವೀಡಾಗುತ್ತಿರುವುದರ ಕುರಿತು ಸಂಶೋಧನಾ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳ ಕಾರಣಕ್ಕೆ ಸಂಭವಿಸುತ್ತಿರಬಹುದೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.

ಆದ್ದರಿಂದ ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡಪರಿಣಾಮಗಳಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಇಂತಹ ಸಾವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜಾರಾಂ ತಲ್ಲೂರು ಅವರ ಮನವಿಯನ್ನು ಪತ್ರದಲ್ಲಿ ಉಲ್ಲೇಖಿಸಿರುವ ಸಿದ್ದರಾಮಯ್ಯ, ಹಠಾತ್ ಸಾವು ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮಕ್ಕೆ ಸೂಚಿಸಿದ್ದಾರೆ.

ಕೋ

WhatsApp Group Join Now
Telegram Group Join Now
Share This Article
error: Content is protected !!