ಕನ್ನಡ ಕೋಗಿಲೆ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡ ಅಖಿಲಾ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದೆ. ವಿಚ್ಛೇದನಕ್ಕಾಗಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.
3 ವರ್ಷಗಳ ಹಿಂದೆ ಅಮೆರಿಕ ನಿವಾಸಿ ಧನಂಜಯ್ ಶರ್ಮ ಜೊತೆ ಅಖಿಲಾ ಪಜಿಮಣ್ಣು ವಿವಾಹ ನೆರವೇರಿತ್ತು. ಆದರೆ ಅವರ ಸಂಸಾರದಲ್ಲಿ ಸಾಮರಸ್ಯ ಮಾಯವಾಗಿದೆ. ಧನಂಜಯ್ ಶರ್ಮಾ ಮತ್ತು ಅಖಿಲಾ ಪಜಿಮಣ್ಣು ಅವರು ಬೇರಾಗಲು ನಿರ್ಧರಿಸಿದ್ದಾರೆ.
ಅಖಿಲಾ ಅವರು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನವರು. ಕಿರುತೆರೆ ಹಾಗೂ ಸೋಶಿಯಲ್ ಮೀಡಿಯಾ ಮೂಲಕ ಅವರು ಖ್ಯಾತಿ ಗಳಿಸಿದ್ದಾರೆ. ಸುಮಧುರ ಗಾಯನದ ಮೂಲಕ ಅವರು ಜನಮನ ಗೆದ್ದಿದ್ದಾರೆ. ಅವರು ಈಗ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ.
ಗಾಯಕಿ ಅಖಿಲಾ ಪಜಿಮಣ್ಣು ಮತ್ತು ಪತಿ ಟಿ.ಆರ್ ಧನರಾಜ್ ಶರ್ಮಾ ಪರಸ್ಪರ ಒಪ್ಪಿ ಇದೇ ಜೂನ್ 12 ರಂದು ಪುತ್ತೂರು ಕೋರ್ಟ್ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪುತ್ತೂರಿನ ವಕೀಲ ಮಹೇಶ್ ಕಜೆ ಮೂಲಕ ಅರ್ಜಿ ಸಲ್ಲಿಸಿದ್ದಾರೆ.
ಅಖಿಲಾ ಪಜಿಮಣ್ಣು ಮತ್ತು ಧನಂಜಯ್ ಶರ್ಮಾ ನಡುವೆ ಮಧ್ಯಸ್ಥಿಕೆಗೆ ಕಳೆದ ಆರು ತಿಂಗಳಿಂದ ಕೋರ್ಟ್ ಅವಕಾಶ ನೀಡಿತ್ತು. ಬುಧವಾರ (ಜೂನ್ 18) ಈ ದಂಪತಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಮ್ಯೂಚುಯಲ್ ಡಿವೋರ್ಸ್ ಪಡೆಯಲು ಇಬ್ಬರೂ ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.




