Ad imageAd image

ಕನಸಿನಲ್ಲಿಯೂ ಕೂಡ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ : ಡಿಸಿಎಂ

Bharath Vaibhav
ಕನಸಿನಲ್ಲಿಯೂ ಕೂಡ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ : ಡಿಸಿಎಂ
DKS
WhatsApp Group Join Now
Telegram Group Join Now

ಹಾಸನ : ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿ ವೈ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು ಕನಸಿನಲ್ಲಿಯೂ ಕೂಡ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.

ಹಾಸನ ಜಿಲ್ಲೆಯ ಅರಕಲಗೂರು ತಾಲೂಕಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದ್ದು, ಗ್ಯಾರಂಟಿಗಳು ಶಾಶ್ವತವಲ್ಲ ತಾತ್ಕಾಲಿಕ ಎಂದು ಹೇಳಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ಆರ್ ಅಶೋಕ್ ಗೆ ಹೇಳುತ್ತಿದ್ದೇನೆ ಕನಸಿನಲ್ಲಿಯೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದಿಲ್ಲ ಎಂದು ತಿಳಿಸಿದರು.

ಲೋಕಸಭಾ ಚುನಾವಣೆಯ ಬಳಿಕ ಜೆಡಿಎಸ್ ಪಕ್ಷ ಉಳಿಯುವುದಿಲ್ಲ. ರಾಜ್ಯದಲ್ಲಿ ಮುಂದೆ ಹಸ್ತ ಕಮಲ ಪಕ್ಷಗಳು ಎರಡೇ ಉಳಿಯುವುದು. ಲೋಕಸಭಾ ಚುನಾವಣೆಯ ಬಳಿಕ ಜೆಡಿಎಸ್ ಪಕ್ಷ ಇರುವುದಿಲ್ಲ.

ಗ್ಯಾರೆಂಟಿಯಿಂದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆಂದು ಎಚ್ ಡಿ ಕುಮಾರಸ್ವಾಮಿ ಅವರು ಹೇಳುತ್ತಾರೆ.ಎಚ್ ಡಿ ಕುಮಾರಸ್ವಾಮಿಗೆ ನೀವೇ ತಕ್ಕ ಉತ್ತರ ನೀಡಬೇಕೆಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

WhatsApp Group Join Now
Telegram Group Join Now
Share This Article
error: Content is protected !!