ಬೆಂಗಳೂರು: ಅಧಿಕಾರಿ ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿಗೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿವೆ.
ಆದ್ರೆ ಈ ಇಬ್ಬರ ಪೈಕಿ ಯಾರೂ ಹೆಜ್ಜೆ ಹಿಂದೆ ಇಡದ ಕಾರಣ ಕಾನೂನು ಹೋರಾಟ ತೀವ್ರಗೊಂಡಿದ್ದು ಕೋರ್ಟ್ ಈ ಇಬ್ಬರು ಅಧಿಕಾರಿಗಳಿಗೆ ಮಹತ್ವದ ಸಲಹೆ ನೀಡಿದೆ.
ಈ ಪ್ರಕರಣದಲ್ಲಿ ರೂಪಾ ಮೌದ್ಗಿಲ್ ವಿರುದ್ಧ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನನಷ್ಟ ಕೇಸ್ನ ಸಾಕ್ಷ್ಯ ವಿಚಾರಣೆ ವೇಳೆ ನ್ಯಾಯಾಲಯ ಅಧಿಕಾರಿಗಳಿಗೆ ಸಲಹೆ ನೀಡಿದ್ದು,ಕೋರ್ಟ್ ಕಲಾಪದಲ್ಲಿ ಸಮಯ ವ್ಯಯಿಸುವ ಬದಲು ರಾಜಿ ಸಂಧಾನದ ಬಗ್ಗೆ ಯೋಚಿಸಿ ಎಂದು ನ್ಯಾಯಾಧೀಶ ವಿಜಯ್ ಕುಮಾರ್ ಜಾಟ್ಲಾ ಸಲಹೆ ನೀಡಿದ್ದಾರೆ.
ಇದೇ ವೇಳೆ ಉತ್ತಮ ಹೆಸರು ಮತ್ತು ಕಾರ್ಯಕ್ಷಮತೆ ಹೊಂದಿರುವ ಈ ಇಬ್ಬರು ಅಧಿಕಾರಿಗಳಿಗೆ One Minute Apology ಪುಸ್ತಕ ಓದುವಂತೆ ನ್ಯಾಯಾಧೀಶರು ಸಲಹೆ ನೀಡಿದ್ದಾರೆ.
ಆದ್ರೆ, ಸುಪ್ರೀಂ ಕೋರ್ಟ್ ತನಕ ಸಾಗಿ ಬಗೆ ಹರಿಯದೆ ಈಗ ಮತ್ತೆ ಕೆಳಹಂತದ ನ್ಯಾಯಾಲಯದಲ್ಲಿ ಈ ವಿಚಾರಣೆ ನಡೆಯುತ್ತಿದ್ದು ಇನ್ನಾದ್ರೂ ಇಬ್ಬರು ಅಧಿಕಾರಿಗಳು ಪಟ್ಟು ಸಡಿಲಿಸ್ತಾರ.. ದೇವರೇ ಬಲ್ಲ.