This is the title of the web page
This is the title of the web page

Live Stream

October 2023
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ಧಾರವಾಡ: ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ದೇಶದ ಅಮೂಲ್ಯ ರತ್ನಗಳು

Join The Telegram Join The WhatsApp

ಧಾರವಾಡ: ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ದೇಶದ ಅಮೂಲ್ಯ ರತ್ನಗಳು. ಅವರ ಚಿಂತನೆ, ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಲು ಕರ್ನಾಟಕ ರಾಜ್ಯ ವಿಕಲಚೇತನರ ಒಕ್ಕೂಟದ ಧಾರವಾಡ ಜಿಲ್ಲಾಧ್ಯಕ್ಷ ಕೇಶವ ತೆಲಗು ಕರೆ ನೀಡಿದರು.

ನಗರದ ಭಾರತ ಸ್ಕೌಟ್-ಗೈಡ್ಸ್ ಮೈದಾನದಲ್ಲಿ ಭಾನುವಾರ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಪ್ರಯುಕ್ತ ಉಭಯ ಮಹಾತ್ಮರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದ ಅವರು, ಈ ನಾಯಕರ ಮಾರ್ಗದಲ್ಲಿ ಯುವಪೀಳಿಗೆ ಸಾಗಬೇಕಿದೆ ಎಂದರು.

ಗೌರವಾಧ್ಯಕ್ಷ ಮಹ್ಮದಗೌಸ್ ಕಳಸಾಪೂರ, ಮಹಾತ್ಮ ಗಾಂಧೀಜಿ ಅವರ ಸತ್ಯ, ಅಹಿಂಸೆ, ತ್ಯಾಗ ಹಾಗೂ ಶಾಸ್ತ್ರೀ ಅವರ ಚಿಂತನೆಗಳ ಮನೋಭಾವ ಸರ್ವರಲ್ಲೂ ಬೆಳೆಯಬೇಕಿದೆ. ಈ ಮೂಲಕ ಪ್ರತಿಯೊಬ್ಬರು ದೇಶಕ್ಕೆ ಏನಾದರು ಕೊಡುಗೆ ನೀಡಬೇಕಿದೆ ಎಂದು ಸಲಹೆ ನೀಡಿದರು.

ಉಪಾಧ್ಯಕ್ಷ ಬಸವರಾಜ ಉಪ್ಪಾರ ಹಾಗೂ ಮಹಿಳಾ ಉಪಾಧ್ಯಕ್ಷೆ ಮಂಗಳಾ ಬೆಟಗೇರಿ ಮಾತನಾಡಿದರು. ಸಹಕಾರ್ಯದರ್ಶಿ ಸಂತೋಷ ಹಿರೇಮಠ, ಮಹಿಳಾ ಕಾರ್ಯದರ್ಶಿ ಈರಮ್ಮ ಹಳವೂರ, ಶ್ರೀಶೈಲ ಸವದತ್ತಿ, ಮಹೇಶ ಗೂಳಪ್ಪನವರ, ಉಮೇಶ ಚೌಡಣ್ಣವರ, ಸತೀಶ ಹೆಗ್ಗಣ್ಣವರ ಇದ್ದರು.

ವರದಿ: ವಿನಾಯಕ ಗುಡ್ಡದಕೇರಿ


Join The Telegram Join The WhatsApp
Bharath Vaibhav
the authorBharath Vaibhav

Leave a Reply