ಮೈಸೂರು : ಡಿ ಕೆ ಶಿವಕುಮಾರ್ ಸಿಎಂ ಆಗುತ್ತಾರೆ ಆದರೆ ಯಾವಾಗ ಅಂತ ಗೊತ್ತಿಲ್ಲ ಎಂದು ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಈಗಾಗಲೇ ಸಿದ್ದರಾಮಯ್ಯ ಉತ್ತರ ಕೊಟ್ಟಿದ್ದಾರೆ ನಾನೇ 5 ವರ್ಷ ಸಿಎಂ ಆಗಿರುತ್ತೇನೆ ಎಂದು ಹೇಳಿದ್ದಾರೆ.
ಹೀಗಾಗಿ ನಾನೇನು ಹೇಳುವ ಅವಶ್ಯಕತೆ ಇಲ್ಲ ಎಂದರು. ಪವರ್ ಶೇರಿಂಗ್ ಬಗ್ಗೆ ಪಕ್ಷದಲ್ಲಿ ಏನು ಚರ್ಚೆ ಆಗಿತ್ತು ಎನ್ನುವುದು ಗೊತ್ತಿಲ್ಲ. ಕಾಂಗ್ರೆಸ್ ಉಸ್ತುವಾರಿ ರಣಧೀಪ್ ಸಿಂಗ್ ಶಾಸಕರ ಅಹವಾಲು ಕೇಳಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಜನರಿಗೆ ಕೆಲಸ ಮಾಡಿಲ್ಲವಾ? ಇನ್ನು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ವಿಚಾರವಾಗಿ ಡಿಕೆ ಶಿವಕುಮಾರ್ ಹುಟ್ಟು ಕಾಂಗ್ರೆಸ್ಸಿಗರು, ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಆದರೆ ಯಾವಾಗ ಏನು ಗೊತ್ತಿಲ್ಲ ಎಂದು ತಿಳಿಸಿದರು