Ad imageAd image

ಮಧ್ಯರಾತ್ರಿ ದಾವೋಸ್‌ಗೆ ಪ್ರಯಾಣ ಬೆಳೆಸಿದ ಡಿ. ಕೆ ಶಿವಕುಮಾರ್

Bharath Vaibhav
ಮಧ್ಯರಾತ್ರಿ ದಾವೋಸ್‌ಗೆ ಪ್ರಯಾಣ ಬೆಳೆಸಿದ ಡಿ. ಕೆ ಶಿವಕುಮಾರ್
DKS
WhatsApp Group Join Now
Telegram Group Join Now

ಬೆಂಗಳೂರು : ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಲುವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮಧ್ಯರಾತ್ರಿ ಸ್ವಿಜರ್‌ಲೆಂಡ್‌ನ ದಾವೋಸ್‌ಗೆ ಪ್ರಯಾಣ ಬೆಳೆಸಿದ್ದಾರೆ. ಜ.18ರಂದು ಶಿವಕುಮಾರ್‌ ಅವರು ದಾವೋಸ್‌ ಪ್ರವಾಸ ನಿಗದಿಯಾಗಿತ್ತು.

ಆದರೆ, ದೆಹಲಿಯಲ್ಲಿ ವರಿಷ್ಠರೊಂದಿಗಿನ ಸಭೆ ಹಿನ್ನೆಲೆಯಲ್ಲಿ ಪ್ರವಾಸ ರದ್ದು ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆಶಿ, ಸಿಎಂ ಸಿದ್ದರಾಮಯ್ಯ ಅವರು ಕೂಡ ದಾವೋಸ್‌ಗೆ ಹೋಗಲು ಹೇಳಿದ್ದಾರೆ.

ವಿರೋಧ ಪಕ್ಷದ ಸ್ನೇಹಿತರೂ ನನಗೆ ಅದೇ ಸಲಹೆ ನೀಡುತ್ತಿದ್ದಾರೆ. ರಾಜ್ಯದ ಹಿತ ವಿಚಾರದಲ್ಲಿ ಕೆಲವೊಮ್ಮೆ ಅವರ ಸಲಹೆಗಳನ್ನು ಸ್ವೀಕರಿಸಬೇಕು ಎಂದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!