ನವದೆಹಲಿ: ಪಂಚರಾಜ್ಯಗಳ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಇಂದು ಮಧ್ಯಾಹ್ನ ೪:೦೦ ಗಂಟೆಗೆ ಭಾರತ ಚುನಾವಣೆ ಆಯೋಗ ಪತ್ರಿಕಾಗೋಷ್ಠಿ ಕರೆದು ಐದು ರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಸುದ್ದಿ ಸಂಸ್ಥೆಯ ವರದಿ ತಿಳಿಸಿದೆ.
ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಪಾಂಡಿಚೇರಿ ಹಾಗೂ ಆಸ್ಸಾಮ್ ರಾಜ್ಯಗಳ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.
ಪಂಚ ರಾಜ್ಯಗಳ ಚುನಾವಣೆ: ಇಂದು ದಿನಾಂಕ ಘೋಷಣೆ ಸಾಧ್ಯತೆ




