ಮೊಳಕಾಲ್ಮುರು:- ಕಾಂಗ್ರೆಸ್ ಪಕ್ಷದ ಚಿತ್ರದುರ್ಗ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಈರಣ್ಣ.ಕೆ ಯಾದವ್ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರಾದ ಎಸ್ ಮಧು ಬಂಗಾರಪ್ಪ ಅನುಮೋದನೆ ಮತ್ತು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಂಕೆ ತಾಜ್ ಪೀರ್ ಸೂಚನೆಯಂತೆ ಶಾಸಕ ಎನ್ ವೈ ಗೋಪಾಲಕೃಷ್ಣರವರ ಮಾರ್ಗದರ್ಶನದಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಟಿಕೆ ಕಲೀಮ ಉಲ್ಲಾ ಅವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾದ ಎನ್ಡಿ ಕುಮಾರ್ ರವರು ಮೊಳಕಾಲ್ಮುರು ಪಟ್ಟಣದ ಕನಕಯ್ಯನಹಟ್ಟಿ ನಿವಾಸಿಯಾದ ಈರಣ್ಣ ಕೆ ಇವರನ್ನು ಕಾಂಗ್ರೆಸ್ ಪಕ್ಷದ ಚಿತ್ರದುರ್ಗ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದಾರೆ.
ಪಟ್ಟಣದಲ್ಲಿ ಶನಿವಾರ ಮಧ್ಯಾಹ್ನ 2:30ಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಟಿಕೆ ಕಲೀಮುಲ್ಲಾ ರವರು ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೂತನವಾಗಿ ಆಯ್ಕೆಯಾದ ಈರಣ್ಣ ಕೆ ಇವರಿಗೆ ನೇಮಕಾತಿ ಪತ್ರ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಎರ್ಜನಳಿ ನಾಗರಾಜ್, ಪತ್ರಕರ್ತರದ ರುದ್ರೇಶ್, ಕೆಂದುಳ್ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.
ವರದಿ ಪಿಎಂ ಗಂಗಾಧರ