Ad imageAd image

ನೇಹಾಳನ್ನ ಮತಾಂತರಕ್ಕೆ ಫಯಾಜ್ ಯತ್ನಿಸಿದ : ಜೋಶಿ

Bharath Vaibhav
JOSHI
WhatsApp Group Join Now
Telegram Group Join Now

ಹುಬ್ಬಳ್ಳಿ : ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಸಂಬಂಧ ಆರೋಪಿ ಫಯಾಜ್ ನನ್ನು ಸಿಐಡಿ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದು, ಈ ನಡುವೆ ನೇಹಾಳನ್ನು ಮತಾಂತರ ಮಾಡಲು ಫಯಾಜ್ ಯತ್ನಿಸಿದ್ದ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹಿರೇಮಠಳನ್ನು ಮತಾಂತರ ಮಾಡಲು ಫಯಾಜ್ ಯತ್ನಿಸಿದ್ದ. ನೇಹಾಳ ತಂದೆ ನಿರಂಜನ್ ಹಿರೇಮಠ ಹೇಳಿದ್ದಾರೆ. ಲವ್ ಆಂಗಲ್ ನಲ್ಲೂ ಪ್ರಕರಣವನ್ನು ತನಿಖೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ನೇಹಾ ಹತ್ಯೆ ಪ್ರಕರಣದಲ್ಲಿ ನೀವೆ ನ್ಯಾಯ ಕೋಡಿ ಎಂದು ನಿರಂಜನ್ ಹೇಳಿದ್ದರು. ಹೀಗಾಗಿ ನಾವು ಹೋರಾಟ ಮಾಡಿದ್ವಿ, ಕಾಂಗ್ರೆಸ್ ನವರು ಅಸಭ್ಯ, ಅಸಡ್ಡೆಯಿಂದ ಮಾತನಾಡಿದ್ರು, ಜನರ ಜೀವದ ಜೊತೆಗೆ ಕಾಂಗ್ರೆಸ್ ಜೆಲ್ಲಾಟವಾಡುತ್ತಿದೆ ಎಂದು ಪ್ರಹ್ಲಾದ್ ಜೋಶಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

WhatsApp Group Join Now
Telegram Group Join Now
Share This Article
error: Content is protected !!