Ad imageAd image

ಪ್ರೀತಿಗೆ ಒಪ್ಪದ ಯುವತಿಯನ್ನು 9 ಬಾರಿ ಇರಿದು ಕೊಂದ ಶಿಕ್ಷಕ ದಂಪತಿ ಮಗ ಫಯಾಜ್ 

Bharath Vaibhav
WhatsApp Group Join Now
Telegram Group Join Now

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿಯನ್ನು 9 ಬಾರಿ ಇರಿದು ಕೊಲೆ ಮಾಡಿದ ಘಟನೆ ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಗುರುವಾರ ಸಂಜೆ ನಡೆದಿದೆ.

ಕೊಲೆಯಾದ ಯುವತಿಯನ್ನು ಬಿವಿವಿ ಕಾಲೇಜಿನಲ್ಲಿ ಎಂಸಿಎ ವಿಭಾಗದಲ್ಲಿ ಓದುತ್ತಿದ್ದ ನೇಹಾ ಹಿರೇಮಠ (25) ಎಂದು ಗುರುತಿಸಲಾಗಿದ್ದು, ಆರೋಪಿ ಆಕೆಯ ಸಹಪಾಠಿ ಫಯಾಜ್‌ (27).ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ. ತನ್ನನ್ನು ಪ್ರೀತಿಸುವಂತೆ ನೇಹಾಗೆ ಫಯಾಜ್ ಹಲವು ದಿನಗಳಿಂದ ಪೀಡಿಸುತ್ತಿದ್ದ. ಆಕೆ ನಿರಾಕರಿಸಿದ ಕಾರಣ ಕೋಪಗೊಂಡ ಆತ ಗುರುವಾರ ಸಂಜೆ ಕೃತ್ಯವೆಸಗಿದ. ನೇಹಾ ಮೇಲೆ ಏಕಾಏಕಿ ಚಾಕುವಿನಿಂದ ದಾಳಿ ನಡೆಸಿ, ಕುತ್ತಿಗೆಗೆ ಹಲವು ಬಾರಿ ಇರಿದ. ಆಕೆಯನ್ನು ತಕ್ಷಣವೇ ವಿದ್ಯಾರ್ಥಿಗಳು ಕಿಮ್ಸ್‌ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಮಾರ್ಗ ಮಧ್ಯೆ ನೇಹಾ ಕೊನೆಯುಸಿರೆಳೆದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಖಂಡಿಸಿ ಕಾಲೇಜು ಆವರಣದಲ್ಲಿ ಎಬಿವಿಪಿ ಕಾರ್ಯಕರ್ತರು ರಾತ್ರಿ ಪ್ರತಿಭಟನೆ ನಡೆಸಿ, ಆರೋ‍ಪಿಗೆ ಗಲ್ಲುಶಿಕ್ಷಿ ವಿಧಿಸುವಂತೆ ಆಗ್ರಹಿಸಿದರು.

 

 

WhatsApp Group Join Now
Telegram Group Join Now
Share This Article
error: Content is protected !!