ಸಿಂಧನೂರು : ಮೇ ೧೯ ನಗರದ ಪತ್ರಿಕಾ ಭವನದಲ್ಲಿ ಪತ್ರಿಕೆ ಘೋಷ್ಠಿ ನಡೆಸಿ ಮಾತನಾಡಿ
ರಾಜ್ಯ ಸರ್ಕಾರದ ಸಾಧನೆ ಸಮಾವೇಶ ಪ್ರಶ್ನಿಸಿ ಮೇ 20 ರಂದು ಬೆಂಗಳೂರಿನಲ್ಲಿ ಜನ ಚಳವಳಿಗಳ ಜನಾಗ್ರಹ ಸಮಾವೇಶ ಹಮ್ಮಿಕೊಂಡಿದ್ದು ಕಳೆದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕರಾಳ ಕೃಷಿ ಕಾಯ್ದೆಗಳ ರದ್ಧತಿ ಬಲವಂತದ ಭೂ ಸ್ವಾಧನಕ್ಕೆ ತಡೆ.
ಬಗಾರ್ ಹುಕ್ಕಂ ಹಾಗೂ ಅರಣ್ಯ ಸಾಗುವಳಿ ರೈತರಿಗೆ ರಕ್ಷಣೆ ಸಂವಿಧಾನ ಹಕ್ಕುಗಳು ಖಾತರಿ ಕೋಮುವಾದಿ ಕೃತ್ಯಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ರೈತರಿಗೆ ಬೆಂಬಲ ಬೆಲೆ ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾದರೂ ಇಂದಿನ ಬಿಜೆಪಿ ಸರಕಾರದ ನೀತಿಗಳನ್ನೇ ಮುಂದುವರೆಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯುತ್ ಖಾಸಗಿಕರಣ ಸೇರಿದಂತೆ ಮೋದಿ ಸರ್ಕಾರದ ಜನ ವಿರೋಧಿ ಕಾರ್ಪೊರೇಟ್ ಪರವಾದ ಎಲ್ಲಾ ಕ್ರಮಗಳನ್ನು ವೇಗವಾಗಿ ಜಾರಿಗೊಳಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಸಾಧನ ಸಮಾವೇಶ ಪ್ರಶ್ನಿಸಿ ಮೇ 20, 2025 ರಂದು ಸಯುಕ್ತ ಹೋರಾಟ ಕರ್ನಾಟಕ ಸಂಘಟನೆಯು ಬೆಂಗಳೂರಿನಲ್ಲಿ ಜನ ಚಳವಳಿಗಳ ಜನಾಗ್ರಹ ಸಮಾವೇಶ ಹಮ್ಮಿಕೊಂಡು ಬಿಜೆಪಿ ಸರ್ಕಾರದ ಕ್ರಮಗಳನ್ನೇ ಮುಂದುವರಿಸುತ್ತಿರುವ ಔಚಿತ್ಯವನ್ನು ಪ್ರಶ್ನಿಸಿ ಜನಾಗ್ರಹ ನಿರ್ಣಯಗಳನ್ನು ಈಡೇರಿಸುವಂತೆ ಆಗ್ರಹಿಸಲಾಗುತ್ತದೆ. ಎಂದು ಹೇಳಿದರು
ಈ ಸಂದರ್ಭದಲ್ಲಿ.
ಡಿ ಎಚ್. ಪೂಜಾರಿ ರಮೇಶ್ ಪಾಟಿಲ್ ಬೇರ್ಗಿ. ಬಿ ಎನ್. ಯರದಿಹಾಳ. ಚಿಟ್ಟಿಬಾಬು. ಡಾಕ್ಟರ್ ಕೆ ಎಸ್. ಜನಾರ್ದನ್. ವಿರುಪಾಕ್ಷಿ ಗೌಡ ಬಸನಗೌಡ ಪೊಲೀಸ್ ಪಾಟೀಲ್. ವೀರಭದ್ರಗೌಡ.
ವರದಿ : ಬಸವರಾಜ ಬುಕ್ಕನಹಟ್ಟಿ.




