Ad imageAd image

ಚಲನಚಿತ್ರ ನಿರ್ದೇಶಕ ಕಾಂಗ್ರೆಸ್ ನ ,ಲೋಕಸಭಾ ಅಭ್ಯರ್ಥಿ ಶ್ರೀಮತಿ ಸಂಯುಕ್ತಾ ಪಾಟೀಲ ಪರ ಭರ್ಜರಿ ಪ್ರಚಾರ.

Bharath Vaibhav
ಚಲನಚಿತ್ರ ನಿರ್ದೇಶಕ ಕಾಂಗ್ರೆಸ್ ನ ,ಲೋಕಸಭಾ ಅಭ್ಯರ್ಥಿ ಶ್ರೀಮತಿ ಸಂಯುಕ್ತಾ ಪಾಟೀಲ ಪರ ಭರ್ಜರಿ ಪ್ರಚಾರ.
WhatsApp Group Join Now
Telegram Group Join Now

ಬಾಗಲಕೋಟೆ:-ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು ಕೋಟೆ ನಗರಿ ಬಾಗಲಕೋಟೆ ಲೋಕಸಭಾ ಚುನಾವಣೆಯ ಅಭ್ಯರ್ಥಿ ಶ್ರೀಮತಿ ಸಂಯುಕ್ತಾ ಪಾಟೀಲ ಪರ ಬಾಗಲಕೋಟೆ ಮತಕ್ಷೇತ್ರದ ಬೇವೂರಿನಲ್ಲಿ ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಎಸ್ ನಾರಾಯಣ ಆಗಮಿಸಿ ರೋಡ್ ಶೋ ನಡೆಸಿ ನಂತರ ಸಭೆಯಲ್ಲಿ ಮಾತನಾಡಿ ಬಾಗಲಕೋಟೆ ಬದಲಾವಣೆಗಾಗಿ ಯುವನಾಯಕಿ ಶ್ರೀಮತಿ ಸಂಯುಕ್ತಾ ಪಾಟೀಲ ಅವರಿಗೆ ಮತಹಾಕಿ ಗೆಲ್ಲಿಸಿ ಎಂದು ಮತಯಾಚನೆ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ  ಶ್ರೀಮತಿ ಸಂಯುಕ್ತಾ ಪಾಟೀಲ ಮಾತನಾಡಿ ಒಂದೇ ಒಂದು ಅವಕಾಶ ಕೊಡಿ ಬಾಗಲಕೋಟೆ ಅಭಿವೃದ್ಧಿಗೆ ಹೊಸ ಅಧ್ಯಾಯ ಕ್ಕೆ ಪಣ ತೊಟ್ಟು ಕನಸು ಕಟ್ಟಿಕೊಂಡಿರುವೆ ನನಗೆ ಆಶೀರ್ವದಿಸಿ ಎಂದು ಮತಯಾಚಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮದ ಗುರುಹಿರಿಯರು ಯುವಕರು ಸಾಕಷ್ಟು ಸಂಖ್ಯೆಯಲ್ಲಿ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.

ವರದಿ:- ರಾಜೇಶ್. ಎಸ್. ದೇಸಾಯಿ 

WhatsApp Group Join Now
Telegram Group Join Now
Share This Article
error: Content is protected !!