Ad imageAd image

ಬೆಳೆ ವಿಮೆಯಲ್ಲಿ 30 ಕೋಟಿ ರೂ. ಲೂಟಿ ಕೇಸ್ : 11 ಜನರ ವಿರುದ್ಧ ಎಫ್‌ಐಆರ್ 

Bharath Vaibhav
ಬೆಳೆ ವಿಮೆಯಲ್ಲಿ 30 ಕೋಟಿ ರೂ. ಲೂಟಿ ಕೇಸ್ : 11 ಜನರ ವಿರುದ್ಧ ಎಫ್‌ಐಆರ್ 
WhatsApp Group Join Now
Telegram Group Join Now

ಬಾಗಲಕೋಟೆ: ಫಸಲ್ ಭೀಮಾ ಯೋಜನೆಯ ಬೆಳೆ ವಿಮೆಯಲ್ಲಿ 30 ಕೋಟಿ ರೂಪಾಯಿ ಲೂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಜನರ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ಸಹಾಯಕ ಕೃಷಿ ನಿರ್ದೇಶಕ ಸಿದ್ದಲಿಂಗೇಶ ದೊಡ್ದಮನಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಮೆಗುಡ್ಡ ಗ್ರಾಮದ ಕಲ್ಲಪ್ಪ ಹುಣಸೀಕಟ್ಟಿ, ಶ್ರೀನಿವಾಸ ಪಾಟೀಲ್, ಕಲ್ಮೇಶ್ ಜನ್ನೂರ, ಶ್ರೀನಿವಾಸ ಹುಣಸೀಕಟ್ಟಿ, ರಮೇಶ್ ಹುಣಸೀಕಟ್ಟಿ, ಪ್ರಕಾಶ್ ಕೋಮಾರ, ಶ್ರೀಕಾಂತ್ ಹಲಗಲಿ ಹಾಗೂ ಇನ್ ಶೂರೆನ್ಸ್ ಉದ್ಯೋಗಿಗಳಾದ ಯಶ್ವಂತ್, ರಾಕೇಶ್, ಪ್ರಕಾಶ್, ಅನಿಲ್ ವಿರುದ್ಧ ಬಾಗಲಕೋಟೆ ಮುಧೋಳ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಬೆಳೆ ವಿಮೆ ಅಕ್ರಮದ ಬಗ್ಗೆ ಜಿಲ್ಲಾಧಿಕಾರಿ ಕಚೇರಿಗೆ ಅನಾಮಧೇಯ ಪತ್ರವೊಂದು ಬಂದಿತ್ತು. ಪತ್ರದ ಆಧಾರದ ಮೇಲೆ ಜಮಖಂಡಿ ಎಸಿ ಮುಧೋಳ ಕೃಷಿ ಅಧಿಕಾರಿಗೆ ನಿರ್ದೇಶನ ನೀಡಿದ್ದು, ಈ ಹಿನ್ನೆಲೆಯಲ್ಲಿ ಮುಧೋಳ ಕೃಷೀ ಸಹಾಯಕ ಮಿರ್ದೇಶಕ ಸಿದ್ದಲಿಂಗೇಶ್ವರ ದೊಡ್ಡಮನಿ ದೂರು ನೀಡಿದ್ದರು.

ಬೆಳೆವಿಮೆ ಹೆಸರಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯನ್ನು ದುರುಪಯೋಗಪಡಿಸಿಕೊಂಡು ಕಳೆದ ಐದು ವರ್ಷಗಳಿಂದ ವಂಚನೆ ನಡೆಯುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!