Ad imageAd image

ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ ಐವರು ಅಪಘಾತದಲ್ಲಿ ಸಾವು ಪುಕರಣ: ಮೃತರ ಕುಟುಬಕ್ಕೆ 5 ಲಕ್ಷ ಪರಿಹಾರ ಘೋಷಣೆ

Bharath Vaibhav
ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ ಐವರು ಅಪಘಾತದಲ್ಲಿ ಸಾವು ಪುಕರಣ: ಮೃತರ ಕುಟುಬಕ್ಕೆ 5 ಲಕ್ಷ ಪರಿಹಾರ ಘೋಷಣೆ
WhatsApp Group Join Now
Telegram Group Join Now

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಬೀದರ್ ನ ಐವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ತೀವ್ರ ಸಂತಾಪ ಸೂಚಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಬೀದರ್ ನ ಲಾಡಗೇರಿಯ 14 ಜನರು ಕುಂಭಮೇಳಕ್ಕೆ ತೆರಳುತ್ತಿದ್ದರು. ಕ್ರೂಸರ್ ವಾಹನ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 8 ಜನರು ಗಾಯಗೊಂಡಿರುವ ಮಾಹಿತಿಯಿದ ಘಟನೆ ತೀವ್ರ ನೋವುಂಟುಮಾಡಿದೆ.

ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲಾಗುವುದು ಎಂದರು. ಮೃತರ ಪಾರ್ಥಿವ ಶರೀರವನ್ನು ಬೀದರ್ ಗೆ ಕರೆತರುವ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು. ಗಾಯಾಳುಗಳು ಬೇಗನೇ ಗುಣಮುಖರಾಗಲಿ ಎಂದರು.

WhatsApp Group Join Now
Telegram Group Join Now
Share This Article
error: Content is protected !!