Ad imageAd image

ಸಿ. ಜೆ ರಾಯ್ ಆತ್ಮಹತ್ಯೆ ಪ್ರಕರಣ : ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ

Bharath Vaibhav
ಸಿ. ಜೆ ರಾಯ್ ಆತ್ಮಹತ್ಯೆ ಪ್ರಕರಣ : ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ
WhatsApp Group Join Now
Telegram Group Join Now

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಡಾ.ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ ಐಟಿ ರಚನೆ ಮಾಡಲಾಗಿದೆ.ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಕೂಡ ಈ ತಂಡದಲ್ಲಿ ಇರಲಿದ್ದಾರೆ ಎಂದು ತಿಳಿಸಿದರು.

ಸಿ.ಜೆ.ರಾಯ್ ಆತ್ಮಹತ್ಯೆಗೆ ನಿಖರ ಕಾರಣಗಳೇನು? ಐಟಿ ದಾಳಿಗೆ ಹೆದರಿ ಆತ್ಮಹತ್ಯೆ ಎಂದು ಹೇಳಲಾಗುತ್ತಿದೆ. ನಿಜಕ್ಕೂ ಐಟಿ ದಾಳಿ ಒತ್ತಡದಿಂದಲೇ ಆತ್ಮಹತ್ಯೆಗೆ ಶರಣಾದರೇ? ಅಥವಾ ಅವರ ಸಾವಿಗೆ ಬೇರೆ ಏನಾದರೂ ಕಾರಣವಿದೆಯೇ? ಡಿಸೆಂಬರ್ ನಲ್ಲಿಯೇ ಐಟಿ ದಾಳಿ ನಡೆದಿತ್ತು.

ಐಟಿ ಅಧಿಕಾರಿಗಳ ವಿಚಾರಣೆ ಈಗಲೂ ಮುಂದುವರೆದಿತ್ತೇ? ರಾಯ್ ಅವರ ಆತ್ಮಹತ್ಯೆ ಬಗ್ಗೆ ಸಂಪೂರ್ಣ ತನಿಖೆ ನಡೆದು ಸತ್ಯಾಸತ್ಯತೆ ಹೊರಬರಬೇಕಿದೆ. ಹಾಗಾಗಿ ಪ್ರಕರಣದ ತನಿಖೆಯನ್ನು ಎಸ್ ಐಟಿಗೆ ವಹಿಸಲಾಗುವುದು ಎಂದು ಹೇಳಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!