Ad imageAd image

ತನಗೆ ಜೀವ ಬೆದರಿಕೆ: ಪೋಲೀಸರಿಗೆ ಮಾಜಿ ಕ್ರಿಕೆಟಿಗ ಗಂಭೀರ ದೂರು

Bharath Vaibhav
ತನಗೆ ಜೀವ ಬೆದರಿಕೆ: ಪೋಲೀಸರಿಗೆ ಮಾಜಿ ಕ್ರಿಕೆಟಿಗ ಗಂಭೀರ ದೂರು
WhatsApp Group Join Now
Telegram Group Join Now

ಟೀಮ್​ ಇಂಡಿಯಾದ ಮುಖ್ಯ ಕೋಚ್ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿವೆ. ‘ನಾನು ನಿನ್ನನ್ನು ಕೊಲ್ಲುತ್ತೇನೆ’ ಎಂಬ ಸಂದೇಶವಿರುವ ಅನಾಮಧೇಯ ಇ-ಮೇಲ್‌ಗಳು ಬಂದಿವೆ ಎಂದು ಗಂಭೀರ್ ಅವರು ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಇ-ಮೇಲ್​ ಯಾರು ಕಳುಹಿಸಿದ್ದಾರೆ ಎಂಬುದರ ಕುರಿತು ಸೈಬರ್ ಸೆಲ್ ತನಿಖೆ ಪ್ರಾರಂಭಿಸಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ ಕುರಿತು ಗೌತಮ್​ ಗಂಭೀರ್​ ಪ್ರತಿಕ್ರಿಯಿಸಿದ್ದರಿಂದ ಈ ಬೆದರಿಕೆ ಸಂದೇಶ ಸ್ವೀಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ, ದೆಹಲಿ ಪೊಲೀಸರ ಮೊರೆ ಹೊಗಿರುವ ಗಂಭೀರ್ ತಮಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. ಈ ಬೆದರಿಕೆಗಳು ಕಾಶ್ಮೀರದಿಂದಲೇ ಬಂದಿವೆ ಎಂದು ವರದಿಯಾಗಿದೆ.

ಪಹಲ್ಗಾಮ್​ ಘಟನೆ ಬಳಿಕ ಪೋಸ್ಟ್​ ಹಂಚಿಕೊಂಡಿದ್ದ ಗಂಭೀರ್​, “ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿದ್ದರು. ಇದಕ್ಕೆ ಕಾರಣರಾದವರು ಖಂಡಿತವಾಗಿಯೂ ಭಾರಿ ಬೆಲೆ ತೆರಬೇಕಾಗುತ್ತದೆ. ಈ ಘಟನೆಗೆ ಭಾರತ ಪ್ರತೀಕಾರ ತೀರಿಸಿಕೊಳ್ಳುತ್ತದೆ” ಎಂದು ಪೋಸ್ಟ್ ಮಾಡಿದ್ದರು. ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ದಾಳಿ ಮಾಡಿದ್ದು, ಈಗಾಗಲೇ ಸಾವಿನ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!