Ad imageAd image

ಕಾಂಗ್ರೆಸ್ ಧುರೀಣ, ಮಾಜಿ ಸಚಿವ ಬೇಗಾನೆ ರಾಮಯ್ಯ ವಿಧಿವಶ 

Bharath Vaibhav
ಕಾಂಗ್ರೆಸ್ ಧುರೀಣ, ಮಾಜಿ ಸಚಿವ ಬೇಗಾನೆ ರಾಮಯ್ಯ ವಿಧಿವಶ 
WhatsApp Group Join Now
Telegram Group Join Now

ಶೃಂಗೇರಿ: ಮಲೆನಾಡು ಭಾಗದ ಹಿರಿಯ ಕಾಂಗ್ರೆಸ್ ಧುರೀಣ, ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ, ಸಚಿವ ಬೇಗಾನೆ ರಾಮಯ್ಯ ಅವರು ನಿಧನರಾಗಿದ್ದಾರೆ.

ಬೇಗಾನೆ ರಾಮಯ್ಯ ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದಾರೆ. ಈ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು.

ಇಂದು ಚಿಕಿತ್ಸೆ ಫಲಿಸದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾಜಿ ಶಾಸಕ, ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಬೇಗಾನೆ ರಾಮಯ್ಯ ವಿಧಿವಶರಾಗಿದ್ದಾರೆ.

ಅಂದಹಾಗೇ ಬೇಗಾನೆ ರಾಮಯ್ಯ ಅವರು 1978ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶೃಂಗೇರಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆ ಬಳಿಕ ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮೀಣ ನೀರು ಪೂರೈಕೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ಇಂದಿರಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಂತ ಅವರು, 1972ರಲ್ಲಿ ನರಸಿಂಹರಾಜಪುರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು.

 

 

WhatsApp Group Join Now
Telegram Group Join Now
Share This Article
error: Content is protected !!