Join The Telegram | Join The WhatsApp |
ಹೊಸಪೇಟೆ (ವಿಜಯನಗರ): ನಿವೇಶನ ಮಾರಾಟಕ್ಕೆ ₹16.28 ಲಕ್ಷ ಪಡೆದು ವಂಚಿಸಿದ ದೂರಿನ ಮೇರೆಗೆ ನಗರಸಭೆಯ ಮಾಜಿ ಸದಸ್ಯ ಡಿ. ವೇಣುಗೋಪಾಲ್ ಅವರನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ವಂಚನೆಗೆ ಸಂಬಂಧಿಸಿದಂತೆ ವೇಣುಗೋಪಾಲ್ ಹಾಗೂ ಅವರ ಪತ್ನಿ ಎಲ್. ಭಾಗ್ಯ ಡಿ. ವೇಣುಗೋಪಾಲ್ ವಿರುದ್ಧ ಇಲ್ಲಿನ ಪಟ್ಟಣ ಪೊಲೀಸ್ ಠಾಣೆಯಲ್ಲಿ ಆ. 27ರಂದು ಪ್ರಕರಣ ದಾಖಲಾಗಿತ್ತು. ರಾಣಿಪೇಟೆಯ ಸಂತೋಷ್ ಕುದುರೆ ಮೇಟಿ ಎಂಬುವರು ಕೊಟ್ಟಿರುವ ದೂರಿನ ಮೇರೆಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶುಕ್ರವಾರ ರಾತ್ರಿ ಪೊಲೀಸರು ವೇಣುಗೋಪಾಲ್ ಅವರನ್ನು ವಶಕ್ಕೆ ಪಡೆದಿದ್ದರು. ‘ಪ್ರಕರಣದ ತನಿಖೆ ಮುಂದುವರೆದಿದೆ’ ಎಂದು ಎಸ್ಪಿ ಡಾ. ಅರುಣ್ ಕೆ. ತಿಳಿಸಿದ್ದಾರೆ.
ವರದಿ : ಪಿ. ಶ್ರೀನಿವಾಸ್
Join The Telegram | Join The WhatsApp |