ತುಮಕೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ನಮಗೆ ಕೊಟ್ಟರೆ ಸಮಗ್ರವಾಗಿ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಇಲ್ಲಿ ಬುಧವಾರ ಹೇಳಿದರು.
ನಗರದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹನಿ ಟ್ರ್ಯಾಪ್ ಮೂಲಕ ನನ್ನ ಡಿ.ಸಿ ಮಾಡಿಸಿದ್ದಾರೆ.
ಈ ಬಗ್ಗೆ ಸಿಬಿಐ ತನಿಖೆ ಮಾಡಿದರೆ ಸತ್ಯಾಂಶ ಹೊರ ಬರಲಿದೆ ಎಂದು ರಮೇಶ್ ಹೇಳಿಗೆ ಪ್ರತಿಕ್ರಿಯಿಸಿದ ಸಚಿವರು, ಶಾಸಕರ ಬಳಿ ಇರುವ ದಾಖಲೆಗಳನ್ನು ಕೊಟ್ಟರೆ, ಅದರ ಆಧಾರದ ಮೇಲೆ ಪೊಲೀಸರಿಂದ ತನಿಖೆ ಮಾಡಿಸಲಾಗುವುದು. ಅನ್ಯಾಯವಾಗಿದ್ದರೆ ನ್ಯಾಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.