Ad imageAd image

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

Bharath Vaibhav
ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ
WhatsApp Group Join Now
Telegram Group Join Now

ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ  ಮಾಡಿಕೊಂಡಿರುವಂತಹ ಘಟನೆ ನಗರದ ಶಿಕಾರಿ ಖಾನೆ ಏರಿಯಾದಲ್ಲಿ ನಡೆದಿದೆ. ಅಶನಾಮ್ ಪ್ರಕಾಶ್ಮಿರ್ಜಿ(22) ಆತ್ಮಹತ್ಯೆ ಮಾಡಿಕೊಂಡ ಯುವಕ. ಅಶನಾಮ್ ತಂದೆ ಮಾಜಿ ಪಾಲಿಕೆ ಸದಸ್ಯ ಪ್ರಕಾಶ್ಮಿರ್ಜಿ ಹೆಸರಿನಲ್ಲಿ ಪಿಸ್ತೂಲ್ ಲೈಸೆನ್ಸ್ಇದೆ. ತಂದೆ, ತಾಯಿ ಮತ್ತು ಸಂಬಂಧಿಗಳು ಮನೆಯಲ್ಲಿದ್ದಾಗಲೇ ಬೆಡ್​​ ರೂಂನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಅಶನಂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗುಂಡಿನ ಶಬ್ದ ಕೇಳಿ ಕುಟುಂಬಸ್ಥರು ಬೆಡ್ರೂಂ ಬಾಗಿಲು ತೆರೆದಿದ್ದಾರೆ. ತಕ್ಷಣ ಅಶನಂ ನನ್ನು ಬಿಎಲ್ಇಡಿ ಆಸ್ಪತ್ರೆಗೆ ಕುಟುಂಬಸ್ಥರು ಸ್ಥಳಾಂತರ ಮಾಡಿದ್ದಾರೆ. ಆದರೆ ಅಶನಂ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಬಿಎಲ್ಇಡಿ ಆಸ್ಪತ್ರೆ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಅಶನಂ ಆತ್ಮಹತ್ಯೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, DySP ಬಸವರಾಜ್ಯಲಿಗಾರ್​, ಸಿಪಿಐ ಮಲ್ಲಯ್ಯ ಮಠಪತಿ, ಎಪಿಎಂಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!