ಬೆಳಗಾವಿ: ಟ್ರ್ಯಾಕ್ಟರ್ ಓವರ್ ಟೇಕ್ ಮಾಡಲು ಹೋಗಿ ಕೆಎಸ್ಆರ್ಟಿಸಿ ಬಸ್ವೊಂದು ಪಲ್ಟಿಯಾಗಿ ಬಿದ್ದ ಪರಿಣಾಮ 23 ಜನರಿಗೆ ಗಂಭೀರವಾದ ಗಾಯಗಳು ಆಗಿವೆ. ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿಯಲ್ಲಿ ಬರುವ ಮೈಶಾಳ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮೈಶಾಳ ಗ್ರಾಮದ ಬಳಿ ಕೆಎಸ್ಆರ್ಟಿಸಿ ಬಸ್ ತೆರಳುತ್ತಿತ್ತು. ಈ ವೇಳೆ ಬಸ್ ಮುಂದೆ ಟ್ರ್ಯಾಕ್ಟರ್ ಹೋಗುತ್ತಿತ್ತು. ಹೀಗಾಗಿ ಈ ಟ್ರ್ಯಾಕ್ಟರ್ ಅನ್ನು ಹಿಂದಿಕ್ಕಲು ಕೆಎಸ್ಆರ್ಟಿಸಿ ಬಸ್ ಚಾಲಕ ಮುಂದಾದಗ ಎದುರಿನಿಂದ ಲಾರಿ ಬಂದಿದೆ. ಇದರಿಂದ ತಕ್ಷಣ ಜಾಗೃತನಾದ ಚಾಲಕ ಅಪಘಾತವನ್ನು ತಪ್ಪಿಸಲು ಹೋದಾಗ ಬಸ್ ಹೋಗಿ ರಸ್ತೆ ಪಕ್ಕಕ್ಕೆ ಬಿದ್ದಿದೆ.