ಬೆಂಗಳೂರು : ಒಂದು ಕಡೆ ಚನ್ನಪಟ್ಟಣ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಬೇಕೆಂಬ ಗೊಂದಲದಲ್ಲಿ ಹೆಚ್ಡಿ ಕುಮಾರಸ್ವಾಮಿ ಇದ್ದರೆ, ಇನ್ನೊಂದು ಕಡೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲೆ ಚಿಕಿತ್ಸೆ ನೀಡಲಾಗುತ್ತಿದೆ.
ಚೆನ್ನಮ್ಮ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಚೆನ್ನಮ್ಮ ಆರೋಗ್ಯ ವಿಚಾರಿಸಲು ಕುಟುಂಬ ಸದ್ಯಸ್ಯರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಕೇಂದ್ರ ಸಚಿವರಾಗಿರುವ ಹೆಚ್ಡಿ ಕುಮಾರಸ್ವಾಮಿ ಅವರು ನಿನ್ನೆ ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ಸಭೆ ನಡೆಸಬೇಕಿತ್ತು ಆದ್ರೆ, ಚೆನ್ನಮ್ಮ ಅವರ ಅನಾರೋಗ್ಯ ಹಿನ್ನೆಲೆ ಸಭೆ ರದ್ದುಗೊಳಿಸಿದ್ದಾರೆ.
ಚನ್ನಪಟ್ಟಣ ಉಪ ಚುನಾವಣೆ ವಿಚಾರವಾಗಿ ನಿನ್ನೆ ಬಿಜೆಪಿ ಜೆಡಿಎಸ್ ಸಮನ್ವಯ ಸಮಿತಿ ಸಭೆ ಕರೆದಿತ್ತು, ಬೆಂಗಳೂರಿನ ಕಾಸಿಗೆ ಹೋಟೆಲಲ್ಲಿ ಈ ಒಂದು ಸಭೆ ನಡೆಬೇಕಿತ್ತು ಆದರೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಈ ಹಿನ್ನೆಲೆಯಲ್ಲಿ ನಾಳೆ ಹೈಕಮಾಂಡ್ನಿಂದಲೇ ಅಭ್ಯರ್ಥಿ ಘೋಷಣೆ ಮಾಡಿಸುತ್ತೇನೆ ಎಂದು ಹೆಚ್ಡಿ ಕುಮಾರಸ್ವಾಮಿ ಅವರು ನಿನ್ನೇನೆ ತಿಳಿಸಿದ್ದಾರೆ.