Ad imageAd image

ಜೈಲಿನಿಂದ ಬಿಡುಗಡೆ ಬೆನ್ನಲ್ಲೇ ದೇವರ ಮೋರೆ ಹೋದ ಎಚ್. ಡಿ ರೇವಣ್ಣ 

Bharath Vaibhav
ಜೈಲಿನಿಂದ ಬಿಡುಗಡೆ ಬೆನ್ನಲ್ಲೇ ದೇವರ ಮೋರೆ ಹೋದ ಎಚ್. ಡಿ ರೇವಣ್ಣ 
WhatsApp Group Join Now
Telegram Group Join Now

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ದೇವರ ಮೊರೆಹೋಗಿದ್ದಾರೆ.

ಪರಪ್ಪನ ಅಗ್ರಹಾರ ಜೈನಿಂದ ಬಿಡುಗಡೆಯಾಗುತ್ತಿದ್ದಂತೆ ಮಾಜಿ ಪ್ರಧಾನಿ, ತಂದೆ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಆಗಮಿಸಿ ತಂದೆ-ತಾಯಿ ಆಶಿರ್ವಾದ ಪಡೆದ ರೇವಣ್ಣ, ಕೆಲ ಕಾಲ ದೇವೇಗೌಡರ ಜೊತೆ, ಮಾಜಿ ಸಿಎಂ ಕುಮಾರಸ್ವಾಮಿ ಜೊತೆ ಸಮಾಲೋಚನೆ ನಡೆಸಿದರು.

ಬಳಿಕ ಪದ್ಮನಾಭನಗರ ನಿವಾಸದಿಂದ ಜೆ.ಪಿ.ನಗರದ ಲಕ್ಷ್ಮೀ ಹೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಹೆಚ್.ಡಿ.ರೇವಣ್ಣ ನಾಳೆ ಹಾಸನದ ಹೊಳೆನರಸೀಪುರದಲ್ಲಿರುವ ದೇವಾಲಯಗಳಿಗೂ ಭೇಟಿ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ದೈವೀಭಕ್ತರಾಗಿರುವ ಹೆಚ್.ಡಿ.ರೇವಣ್ಣ ಜೈಲಿನಿಂದ ಬಿಡಿಗಡೆಯಾಗುತ್ತಿದ್ದಂತೆ ವಿವಿಧ ದೇವಾಲಯಗಳಿಗೆ ತೆರಳುತ್ತಿದ್ದು, ಟೆಂಪಲ್ ರನ್ ಆರಂಭಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!