Ad imageAd image
- Advertisement -  - Advertisement -  - Advertisement - 

ಕೇರಳದಲ್ಲಿ ಭಾರೀ ಭೂಕುಸಿತ: 19 ಮಂದಿ ಸಾವು, 400ಕ್ಕೂ ಹೆಚ್ಚು ಮಂದಿ ಕಣ್ಮರೆ

Bharath Vaibhav
ಕೇರಳದಲ್ಲಿ ಭಾರೀ ಭೂಕುಸಿತ: 19 ಮಂದಿ ಸಾವು, 400ಕ್ಕೂ ಹೆಚ್ಚು ಮಂದಿ ಕಣ್ಮರೆ
WhatsApp Group Join Now
Telegram Group Join Now

ಕೇರಳ: ಕೇರಳದಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿದ್ದು, 19 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 400ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ.

ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳಿಗೆ ವಯನಾಡ್ ಗೆ ತೆರಳಲು ಆದೇಶಿಸಲಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ವಯನಾಡ್ ಮತ್ತು ಇತರ 9 ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಈಗಾಗಲೇ ಮುಚ್ಚಲಾಗಿದೆ.

ವಯನಾಡ್ ನಲ್ಲಿ ಇಂದು ಮುಂಜಾನೆಯಿಂದ ಸತತವಾಗಿ ಮೂರು ಗ್ರಾಮಗಳಲ್ಲಿ ಸಾಲು ಸಾಲು ಭೂ ಕುಸಿತ ಸಂಭವಿಸಿದೆ. ಪ್ರವಾಹದಂತೆ ಹರಿದು ಬಂದ ನೀರಿನ ರಭಸಕ್ಕೆ ಮನೆಗಳು, ಅಂಗಡಿಗಳು ಕೊಚ್ಚಿ ಹೋಗಿವೆಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿ, ಎನ್ ಡಿ ಆರ್ ಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

WhatsApp Group Join Now
Telegram Group Join Now
Share This Article
error: Content is protected !!