Ad imageAd image

ಹಿರೇ ಓತಗೇರಿ ಗ್ರಾಮದ,ಸಂಭ್ರಮದಿಂದ ನಡೆದ ಹೇಮರೆಡ್ಡಿ ಮಲ್ಲಮ್ಮನವರ ಜಯಂತೋತ್ಸವ ಸಮಾರಂಭ

Bharath Vaibhav
WhatsApp Group Join Now
Telegram Group Join Now

ಇಳಕಲ್: –ಸಮೀಪದ ಹಿರೇಓತಗೇರಿ ಗ್ರಾಮದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜಯಂತೋತ್ಸವ ಸಮಾರಂಭ ಸಂಭ್ರಮದಿಂದ ನಡೆಯಿತು.ಮುಂಜಾನೆ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಮೂರ್ತಿಗೆ ಅಭಿಷೇಕ ಪೂಜೆಗಳು ನಡೆದವು. ನಂತರ ದೇವಸ್ಥಾನದ ನೂತನ ಗೋಪುರಕ್ಕೆ ಕಾಳಸಾರೋಹಣ ಕಾರ್ಯಕ್ರಮಗಳು ಜರುಗಿದವು.

ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯ ಮೇಳಗಳೊಂದಿಗೆ ಕಳಸದೊಂದಿಗೆ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರದ ಮೆರವಣಿಗೆ ಸಂಭ್ರಮದಿಂದ ನಡೆಯಿತು.ಬಂದಂತಹ ಭಕ್ತಾದಿಗಳಿಗೆ ಗ್ರಾಮದ ಯುವ ಮಿತ್ರರು ಗುರುಹಿರಿಯರು ವಿವಿಧ ಪ್ರಸಾದ ವ್ಯವಸ್ಥೆ ಮಾಡಿ ಪಡಿಸಿದರು.

ಸುತ್ತಮುತ್ತಲಿನ ಗ್ರಾಮಸ್ಥರು ಸಹ ದೇವಸ್ಥಾನಕ್ಕೆ ಆಗಮಿಸಿ ಪ್ರಸಾದವನ ಸ್ವೀಕರಿಸಿ ತಾಯಿಯ ಆಶೀರ್ವಾದವನ್ನು ಪಡೆದರು.

ವರದಿ ದಾವಲ್ ಶೇಡಂ

WhatsApp Group Join Now
Telegram Group Join Now
Share This Article
error: Content is protected !!