Ad imageAd image

ಕಂದಾಯ ನೌಕರರ ಸಮಸ್ಯೆಗಳ ನಿವಾರಣೆಗೆ ಜಿಲ್ಲಾಧ್ಯಕ್ಷ ನರಸಿಂಹರಾಜು ಭರವಸೆ

Bharath Vaibhav
ಕಂದಾಯ ನೌಕರರ ಸಮಸ್ಯೆಗಳ ನಿವಾರಣೆಗೆ ಜಿಲ್ಲಾಧ್ಯಕ್ಷ ನರಸಿಂಹರಾಜು ಭರವಸೆ
WhatsApp Group Join Now
Telegram Group Join Now

ಪಾವಗಡ :ಪಟ್ಟಣದ ತಾಲ್ಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಬಳಿ ಸಾಯಂಕಾಲ ಕಂದಾಯ ಇಲಾಖೆ ನೌಕರರ ಸಂಘದ ಸಭೆ ಜಿಲ್ಲಾಧ್ಯಕ್ಷ ನರಸಿಂಹರಾಜು ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಸಭೆಯಲ್ಲಿ ಪಾಲ್ಗೊಂಡಿದ್ದ ಸಂಘದ ಜಿಲ್ಲಾಧ್ಯಕ್ಷರಾದ ನರಸಿಂಹರಾಜು ಅವರು, ತಾಲ್ಲೂಕಿನ ಕಂದಾಯ ಇಲಾಖೆಯಲ್ಲಿ ಎದುರಾಗಿರುವ ವಿವಿಧ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

​ಜಿಲ್ಲಾ ಪದಾಧಿಕಾರಿಗಳ ತಂಡವು ಪಾವಗಡ ತಾಲ್ಲೂಕಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ಸ್ಥಳೀಯ ಕಂದಾಯ ನೌಕರರು ಹಾಗೂ ಗ್ರಾಮ ಸಹಾಯಕರೊಂದಿಗೆ ಸಮಾಲೋಚನೆ ನಡೆಸಲಾಯಿತು.

ಈ ವೇಳೆ ನೌಕರರು ತಾವು ಎದುರಿಸುತ್ತಿರುವ ಪ್ರಮುಖ ಸವಾಲುಗಳ ಬಗ್ಗೆ ಜಿಲ್ಲಾಧ್ಯಕ್ಷರ ಮುಂದೆ ಸುದೀರ್ಘವಾಗಿ ಚರ್ಚಿಸಿದರು.

ಪಾವಗಡ ತಾಲ್ಲೂಕಿನ ಕಂದಾಯ ಇಲಾಖೆಯಲ್ಲಿ ನೌಕರರು ಅನುಭವಿಸುತ್ತಿರುವ ಅತಿಯಾದ ಕೆಲಸದ ಒತ್ತಡ ಮತ್ತು ಇಲಾಖೆಯ ಆಂತರಿಕ ಸಮಸ್ಯೆಗಳ ಬಗ್ಗೆ ಪದಾಧಿಕಾರಿಗಳು ಸಮಗ್ರ ಮಾಹಿತಿಯನ್ನು ಸಂಗ್ರಹಿಸಿದರು.

​ನೌಕರರ ನ್ಯಾಯಬದ್ಧ ಬೇಡಿಕೆಗಳನ್ನು ಹಾಗೂ ತಾಂತ್ರಿಕ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಮತ್ತು ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದು ಶೀಘ್ರವಾಗಿ ಪರಿಹರಿಸುವ ಭರವಸೆಯನ್ನು ಈ ಸಂದರ್ಭದಲ್ಲಿ ನೀಡಲಾಯಿತು.

ನೌಕರರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಹಾಗೂ ಸಂಘಟನೆಯನ್ನು ಮತ್ತಷ್ಟು ಶಕ್ತಿಯುತಗೊಳಿಸುವ ಮೂಲಕ ತಮ್ಮ ಹಕ್ಕುಗಳನ್ನು ಪಡೆಯಬೇಕು ಎಂದು ಜಿಲ್ಲಾಧ್ಯಕ್ಷರು ಕರೆ ನೀಡಿದರು.

​ ಕಂದಾಯ ಇಲಾಖೆಯ ಮೂಲ ಹಂತದ ಕೆಲಸಗಾರರಾದ ಗ್ರಾಮ ಸಹಾಯಕರ ಸಂಘದ ಸದಸ್ಯರ ಸಮಸ್ಯೆಗಳ ಬಗ್ಗೆಯೂ ಸಭೆಯಲ್ಲಿ ವಿಶೇಷ ಗಮನಹರಿಸಲಾಯಿತು.

ಈ ​ ವೇಳೆಯಲ್ಲಿ ಈ ಸಭೆಗೆ ಭಾಗವಹಿಸಿದವರು. ಗ್ರಾಮ ಆಡಳಿತ ಅಧಿಕಾರಿ ಜಿಲ್ಲಾ ಅಧ್ಯಕ್ಷ ದೇವರಾಜು. ರಾಜ್ಯ ಪ್ರಧಾನ ಜಂಟಿ ಕಾರ್ಯದರ್ಶಿ ರಂಜಿತ್ ಕುಮಾರ್. ಕಂದಾಯ ಇಲಾಖೆಯ ನೌಕರ ಸಂಘಕ್ಕೆ ತಾಲೂಕ್ ಘಟಕ ಅಧ್ಯಕ್ಷ ಕಿರಣ್ ಕುಮಾರ್.ಕಂದಾಯ ಇಲಾಖೆ ನೌಕರರ ಸಂಘಕ್ಕೆ ನಿರ್ದೇಶಕರಗಳರಾದ. ಶಿರಸ್ತೆದಾರ್ ಚಂದ್ರಶೇಖರ್. ಆರ್ ಐ ರಾಜಗೋಪಾಲ್. ರಾಜೇಶ್. ಸಂಘದ ಪದಾಧಿಕಾರಿಗಳು, ಮತ್ತು ಗ್ರಾಮ ಸಹಾಯಕರ ಸಂಘದ ಸದಸ್ಯರು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು .

ವರದಿ:ಶಿವಾನಂದ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!