Ad imageAd image

ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ:30 ದಿನಗಳ ಅಂತರದಲ್ಲಿ ಎರಡು ಕೋಟಿ

Bharath Vaibhav
WhatsApp Group Join Now
Telegram Group Join Now

ಚಾಮರಾಜನಗರ : ಪವಾಡ ಪುರುಷ ಮಹದೇಶ್ವರರು ನೆಲೆಸಿರುವ ಪ್ರಸಿದ್ದ ಧಾರ್ಮಿಕ ಯಾತ್ರಾ ಸ್ಥಳವಾಗಿರುವ ಕರ್ನಾಟಕ ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಕಾಣಿಕೆ ಏಣಿಕೆ ಕಾರ್ಯ ನಡೆದು, 30 ದಿನಗಳಲ್ಲಿ ಎರಡು ಕೋಟಿ ಐವತ್ತೆಂಟು ಲಕ್ಷದ ನಲವತ್ತ ನಾಲ್ಕು ಸಾವಿರದ ತೊಂಭತ್ತೇಳು ರೂಪಾಯಿಗಳು ಸಂಗ್ರಹವಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರಾದ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಗಳ ದಿವ್ಯಸಾನಿದ್ಯದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ರಘು ರವರ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 30 ದಿನಗಳಲ್ಲಿ ಒಟ್ಟು ಮೊತ್ತ 2,58,44,097 (ಎರಡು ಕೋಟಿ ಐವತ್ತೆಂಟು ಲಕ್ಷದ ನಲವತ್ತ ನಾಲ್ಕು ಸಾವಿರದ ತೊಂಭತ್ತೇಳು ರೂಪಾಯಿಗಳು ) ಹಾಗೂ 93 ಗ್ರಾಂ , 3 ಕೆ.ಜಿ 350 ಗ್ರಾಂ ಬೆಳ್ಳಿ ಹುಂಡಿಯಲ್ಲಿ ದೊರೆತಿದೆ. ಹಾಗೂ ಸೌತ್ ಅರಿಬಿಯಾ, ಜಪಾನ್, ನೇಪಾಳ ಹಾಗೂ ಕಧರ್ ದೇಶದ ತಲಾ ಒಂದೊಂದು ನೋಟ್ ದೊರತ್ತಿದ್ದು, ಎರಡು ಸಾವಿರ ಮುಖ ಬೆಲೆಯ 25 ನೋಟ್ ಗಳು ಸಹ ಹುಂಡಿಯಲ್ಲಿ ದೊರೆತ್ತಿದೆ.

ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ, ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರು ನಾಗೇಶ್, ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿ ಮುಜರಾಯಿ ಶಾಖೆಯ ಕುಮಾರಿ ಶ್ವೇತಾ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಬ್ಯಾಂಕ್ ಆಪ್ ಬರೋಡ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.

ವರದಿ : ಸ್ವಾಮಿ ಬಳೇಪೇಟೆ

WhatsApp Group Join Now
Telegram Group Join Now
Share This Article
error: Content is protected !!