Ad imageAd image

ಸಚಿವರು, ಅಧಿಕಾರಿಗಳೇ ನಿಮಗೂ ಅಕ್ಕ, ತಂಗಿ, ತಾಯಿ ಇಲ್ವಾ? : ಕುಮಾರಸ್ವಾಮಿ ಆಕ್ರೋಶ

Bharath Vaibhav
HDK
WhatsApp Group Join Now
Telegram Group Join Now

ಚಿಕ್ಕಬಳ್ಳಾಪುರ : ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು ಸಚಿವರು, ಅಧಿಕಾರಿಗಳೇ ನಿಮಗೂ ಅಕ್ಕ, ತಂಗಿ, ತಾಯಿ ಇಲ್ವಾ? ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ತಪ್ಪಿತಸ್ಥರು ಯಾರೇ ಆಗಿದ್ರೂ ಶಿಕ್ಷೆಯಾಗಲಿ.ಪೆನ್​ಡ್ರೈವ್ ಹಂಚಿದವರ ತಪ್ಪು ಇಲ್ಲ ಅಂತಾ ಸಿಎಂ ಹೇಳಿದ್ದಾರೆ. ಪೆನ್​ಡ್ರೈವ್ ಹಂಚಿದವರ ರಕ್ಷಣೆಗೆ ಇದ್ದೇವೆಂದು ಹೇಳಿದಂತಾಗಿದೆ. ನೊಂದವರಿಗೆ ಸರ್ಕಾರ ಏನು ಸಾಂತ್ವನ ಹೇಳ್ತಿದೆ ವಾಗ್ದಾಳಿ ಮಾಡಿದ್ದಾರೆ.

ಒಂದು ಚುನಾವಣೆ ಗೆಲ್ಲಲು ಇಷ್ಟು ಕೀಳು ಮಟ್ಟಕ್ಕೆ ಇಳಿದಿದ್ದಾರೆ. ಸಚಿವರು, ಅಧಿಕಾರಿಗಳೇ ನಿಮಗೂ ಅಕ್ಕ, ತಂಗಿ, ತಾಯಿ ಇಲ್ವಾ? ಪ್ರಜ್ವಲ್​ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ಮಾಡುತ್ತಿಲ್ಲ. ಪ್ರಕರಣವನ್ನು ಸಿಬಿಐಗೆ ಕೊಟ್ಟರೆ ಸರ್ಕಾರ ಸಿಕ್ಕಿ ಹಾಕಿಕೊಳ್ಳುತ್ತದೆ. ಪೆನ್​ಡ್ರೈವ್ ಹಂಚಿದವರು ಸಿಕ್ಕಿ ಬೀಳ್ತಾರೆ, ಅದಕ್ಕೆ ಸಿಬಿಐಗೆ ಕೊಡುತ್ತಿಲ್ಲ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!