Ad imageAd image

ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ಬಿಜೆಪಿ ಅಭ್ಯರ್ಥಿಯಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರ ಪರ

Bharath Vaibhav
ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ಬಿಜೆಪಿ ಅಭ್ಯರ್ಥಿಯಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರ ಪರ
WhatsApp Group Join Now
Telegram Group Join Now

ಸಂಕೇಶ್ವರ:-  ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ಬಿಜೆಪಿ ಅಭ್ಯರ್ಥಿಯಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರ ಪರವಾಗಿ ಹುಕ್ಕೇರಿ ಕ್ಷೇತ್ರದ ಸೊಲ್ಲಾಪುರ ಗ್ರಾಮದಲ್ಲಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆಯವರು ಪ್ರಚಾರ ಸಭೆ ನಡೆಸಿ ಮಾತನಾಡಿದರು.

ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಕಳೆದ ಹತ್ತು ವರ್ಷಗಳಲ್ಲಿ ಅಕ್ಷಯ ಪಾತ್ರೆಯಂತೆ 7 ಲಕ್ಷ ಕೋಟಿಗೂ ಅಧಿಕ ಅನುದಾನದಿಂದ ರಾಜ್ಯದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳು ಜಾರಿಯಾಗಿವೆ.ಮುಂದಿನ 5 ವರ್ಷ ದೇಶ ಇನ್ನು ಹೆಚ್ಚು ಅಭಿವೃದ್ಧಿ ಕಾಣಲು ಬಿಜೆಪಿಗೆ ಮತ ನೀಡಿ ಪ್ರಚಂಡ ಬಹುಮತದಿಂದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ನಿಖಿಲ ಕತ್ತಿ,ಶ್ರೀ ಶಶಿರಾಜ ಪಾಟೀಲ, ಶ್ರೀ ರಾಜೇಂದ್ರ ಪಾಟೀಲ, ಸೌ. ವಂದನಾ ನಾಯಿಕ, ಶ್ರೀ ಅಶೋಕ ಮಸ್ತಿ, ಸೌ ಬಿಸ್ಮಲಾ ಮಸತೋಳಿ ಶ್ರೀ ಅನಿಲ ಖಾನಾಯಿ ಶ್ರೀ ರಾಜು ಕೋರೆ, ಶ್ರೀ ಮಹಾದೇವ ಕ್ಷೀರಸಾಗರ, ಶ್ರೀ ಸಂಜಯ ಖೋತ, ಸ್ಥಳೀಯ ಮುಖಂಡರು, ಗಣ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!