Ad imageAd image

ಶಾಸಕ ಆಸೀಫ್ (ರಾಜು) ಸೇಠ್ ಅನುಪಸ್ಥತಿಯಲ್ಲಿ ಪುತ್ರನಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ

Bharath Vaibhav
WhatsApp Group Join Now
Telegram Group Join Now

ಬೆಳಗಾವಿ: ಜನತೆಗೆ ನೀಡಿದ ಭರವಸೆಯನ್ನು ಉಳಿಸಿಕೊಳ್ಳುವ ಉದ್ಧೇಶದಿಂದ ತಂದೆಯ ಅನುಪಸ್ಥಿತಿಯಲ್ಲಿ ಅಧಿಕಾರಿಗಳ ತಂಡದೊಂದಿಗೆ ತೆರಳಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟಿಸಲಾಗುತ್ತಿದೆ ಎಂದು ಉತ್ತರದ ಶಾಸಕ ಆಸೀಫ್ (ರಾಜು) ಸೇಠ್ ಅವರ ಪುತ್ರ ಅಮಾನ್ ಸೇಟ್ ತಿಳಿಸಿದರು.

ಖುಸ್ರೋ ನಗರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ಶಾಸಕ ಆಸೀಫ್ (ರಾಜು) ಸೇಠ್ ಕಳೆದ ತಿಂಗಳ ಮಹಾಂತೇಶ ನಗರದ ವಿವಿಧ ಸಮಸ್ಯೆಗಳನ್ನು ವಿಕ್ಷಿಸಿದ್ದರು. ಮಳೆಗಾಲದಲ್ಲಿ ರಸ್ತೆ ಮೇಲೆಲ್ಲಾ ನೀರು ಹರಿದು ಸಂಚಾರಕ್ಕೆ ಅಡಚನೆ ಯಾಗುತ್ತದೆ. ಹೀಗೆ ಅನೇಕ ಸಮಸ್ಯೆಗಳ ಪರಿಹಾರಕ್ಕೆ ವಿವಿಧ ಕಾಮಗಾರಿಗಳನ್ನು ಪ್ರಾರಂಭಿಸುವುದಾಗಿ ಭರವಸೆಯನ್ನು ನೀಡಿದ್ದರು. ತಂದೆಯವರು ನೀಡಿದ ಬರವಸೆಯಂತೆ ನಗರದ ವಿವಿಧ ಪ್ರದೇಶಗಳ ತ್ವರಿತ ಸಮಸ್ಯೆಗಳ ಪರಿಹಾರಕ್ಕೆ ಕಾಮಗಾರಿಗಳಿಗೆ ಚಾಲನೆಯನ್ನು ನೀಡಲಾಗುತ್ತಿದೆ.  ಸ್ಥಳೀಯ ಕಾರ್ಪೊರೇಟರ್ ಮತ್ತು ಪಾಲಿಕೆ ಅಧಿಕಾರಿಗಳ ತಂಡದೊಂದಿಗೆ ತೆರಳಿ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದರು.

ವರದಿ : ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!