Ad imageAd image

ಸಚಿವೆ ಹೆಬ್ಬಾಳ್ಕರ್ ಹೆಸರಿನಲ್ಲಿ 16 ಜನರಿಗೆ ವಂಚನೆ : ಲಕ್ಷ ಲಕ್ಷ ರೂ. ಲೂಟಿ ಆರೋಪ 

Bharath Vaibhav
ಸಚಿವೆ ಹೆಬ್ಬಾಳ್ಕರ್ ಹೆಸರಿನಲ್ಲಿ 16 ಜನರಿಗೆ ವಂಚನೆ : ಲಕ್ಷ ಲಕ್ಷ ರೂ. ಲೂಟಿ ಆರೋಪ 
laxmi hebbalkar
WhatsApp Group Join Now
Telegram Group Join Now

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ 16 ಜನರಿಗೆ ವಂಚನೆ ಮಾಡಲಾಗಿದೆ. ಬೆಂಬಲಿಗ ಮಂಜುನಾಥ್ ವಿರುದ್ಧ ವಂಚನೆ ಆರೋಪವನ್ನು ಸಾಮಾಜಿಕ ಹೋರಾಟಗಾರ ಜಯಂತ್ ತಿನೇಕರ್  ತಿಳಿಸಿದರು.

 

ಅಲ್ಲದೇ ಪೊಲೀಸರು ದೂರು ಸ್ವೀಕರಿಸದ ಹಿನ್ನಲೆಯಲ್ಲಿ ಗಂದಿಗವಾಡದ ಕಾವ್ಯಾ ಯಳ್ಳೂರರಿಂದ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ 16 ಜನರಿಗೆ ವಂಚನೆ ಮಾಡಲಾಗಿದೆ. 34 ಲಕ್ಷಕ್ಕೂ ಅಧಿಕ ಹಣ ಪಡೆದು ವಂಚನೆ ಮಾಡಿದ್ದಾರೆ. ಸಾಮಾಜಿಕ ಹೋರಾಟಗಾರ ಜಯಂತ್ ತಿನೇಕರ್ ಎಂಬುವರು ಆರೋಪಿಸಿದ್ದಾರೆ.

ರಾಜ್ಯಪಾಲರ ಆದೇಶ ಎಂದು ನಕಲಿ ಪತ್ರಗಳನ್ನು ನೀಡಿ ವಂಚನೆ ಮಾಡಿದ್ದಾರೆ. ಹೆಬ್ಬಾಳ್ಕರ್ ನಕಲಿ ಸಹಿ ಮಾಡಿದ ಆದೇಶ ಪ್ರತಿ ವಿತರಿಸಿದ್ದಾರೆ. ಬೆಳಗಾವಿ, ಬೈಲಹೊಂಗಲ, ಖಾನಾಪುರ ಸೇರಿ ಹಲವೆಡೆ ವಂಚನೆ ಮಾಡಿದ್ದಾರೆ ಎಂದಿದ್ದಾರೆ.

16 ಜನರಿಂದ 34 ಲಕ್ಷಕ್ಕೂ ಹೆಚ್ಚು ಹಣ ಪಡೆದು ವಂಚನೆ ಮಾಡಲಾಗಿದೆ. ಇದರಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸಂಗನಗೌಡ ಹೆಸರು ಕೂಡ ತಳುಕು ಹಾಕಿಕೊಂಡಿದೆ. ನಾವು ಕೊಟ್ಟ ದೂರು ಪೊಲೀಸರು ಸ್ವೀಕರಿಸಿಕೊಳ್ಳುತ್ತಿಲ್ಲ ಎಂಬುದಾಗಿ ಆರೋಪಿಸಿ ಗಂದಿಗವಾಡದ ಕಾವ್ಯಾ ಯಳ್ಳೂರರಿಂದ ಕೋರ್ಟ್ ಗೆ ದೂರು ನೀಡಲಾಗಿದೆ ಎಂದು ಹೇಳಿದರು.

ವಂಚನೆ ಕುರಿತು ನಾವು ಕೋರ್ಟ್ ನಲ್ಲಿ ಕೇಸ್ ಹಾಕಿದ್ದೇವೆ. ಕಿತ್ತೂರು ಠಾಣಾ ವ್ಯಾಪ್ತಿಗೆ ಈ ಘಟನೆ ಬರದಿದ್ದರೂ ಕಿರುಕುಳ. ಕಿತ್ತೂರು ಪೊಲೀಸರಿಂದ ನಿರಂತರ ಕಿರಿಕಿರಿ ಎಂದು ಆರೋಪಿಸಲಾಗಿದೆ. ರಾಜ್ಯಪಾಲರು, ಸಿಎಂ, ಗೃಹ ಸಚಿವರಿಗೂ ದೂರು ನೀಡಿದ್ದೇವೆ ಎಂದು ಬೆಳಗಾವಿಯಲ್ಲಿ ಹೋರಾಟಗಾರ ಜಯಂತ್ ತಿನೇಕರ್ ಹೇಳಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!