Ad imageAd image

ಜಗತ್ತಿಗೆ ಯೋಗ ಪರಿಚಯಿಸಿದ ಕೀರ್ತಿ ಭಾರತ ದೇಶದ್ದಾಗಿದೆ : ಶಾಸಕ ಎಸ್ ಮುನಿರಾಜು

Bharath Vaibhav
ಜಗತ್ತಿಗೆ ಯೋಗ ಪರಿಚಯಿಸಿದ ಕೀರ್ತಿ ಭಾರತ ದೇಶದ್ದಾಗಿದೆ : ಶಾಸಕ ಎಸ್ ಮುನಿರಾಜು
WhatsApp Group Join Now
Telegram Group Join Now

ಬೆಂಗಳೂರು : ಯೋಗ ಪರಿಚಯಿಸಿದ ಕೀರ್ತಿ ಭಾರತ ದೇಶಕ್ಕೆ ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಎಂದರೆ ತಪ್ಪಾಗಲಾರದು ಎಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಮುನಿರಾಜು ಹೇಳಿದರು.

ಅವರು ಕ್ಷೇತ್ರದ ವ್ಯಾಪ್ತಿಗೆ ಬರುವ ರಾಜಗೋಪಾಲನಗರ ವಾರ್ಡಿನ ಶ್ರೀರಾಮನ ದೇವಸ್ಥಾನ ಎದುರುಗಡೆ ಇರುವ ಮುನಿಗಂಗಪ್ಪ ಆಟದ ಮೈದಾನದಲ್ಲಿ ಬೆಂಗಳೂರು ಉತ್ತರ ವಲಯ ಹೆಗ್ಗನಹಳ್ಳಿ ಕ್ಲಸ್ಟರ್ ಸರ್ಕಾರಿ ಅರೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವತಿಯಿಂದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಯೋಗಾರಥಿಗಳನ್ನು ಉದ್ದೇಶಿಸಿ ಶಾಸಕ ಎಸ್ ಮುನಿರಾಜು ಮಾತನಾಡಿದರು. ಡಾ. ಜಗದೀಶ್ ಎಂ ಎಸ್ ಅವರು ಯೋಗ ಪ್ರದರ್ಶನ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ ಅಧಿಕಾರಿ ಆಂಜನಪ್ಪ, ನಿಸರ್ಗ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಹಾಗೂ ಮಾಜಿ ಪಾಲಿಕೆ ಸದಸ್ಯ ಎಚ್ ಎನ್ ಗಂಗಾಧರ್, ಎಂಇಎಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಜೆ.ಎಂ ದೇಶಯ, ಎಸ್ ವಿ ಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಆರ್ಕೇಶ್,ಸಿಆರ್ ಪಿ ಕುಮಾರ್, ಎನ್ ಎಸ್ ಶಾಲೆಯ ಅಧ್ಯಕ್ಷ ದುರ್ಗಯ್ಯ, ವಿವಿಧ ಶಾಲೆಗಳ ಶಿಕ್ಷಕರಾದ ಹನುಮಂತರಾಯಪ್ಪ, ಮಲ್ಲಿಕಾರ್ಜುನ್, ರಮೇಶ್ ಸೇರಿದಂತೆ ಶಿಕ್ಷಕ ಶಿಕ್ಷಕಿಯರು ವಿದ್ಯಾರ್ಥಿಗಳು ಪೋಷಕರು ಮುಂತಾದವರು ಉಪಸ್ಥಿತರಿದ್ದರು.

ವರದಿ: ಅಯ್ಯಣ್ಣ ಮಾಸ್ಟರ್ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!