ಲಿಂಗಸುಗೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇವರ ಕನಸಿನ ಕೂಸಾದ ಇಂದಿರಾ ಕ್ಯಾಂಟೀನ್ ಉದ್ಘಾಟನೆ
ಹಟ್ಟಿ ಪಟ್ಟಣದ ಸಂತೆ ಬಜಾರ್ ನಲ್ಲಿ ನಿರ್ಮಾಣವಾದ ಈ ಕಟ್ಟಡ ಉದ್ಘಾಟನೆ ದಿನಾಂಕ 17.05.2025 ಸಂಜೆ 5:00 ಗಂಟೆಗೆ
ಶ್ರೀ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಕರ್ನಾಟಕ ಸರ್ಕಾರ
ರಹೀಮ್ ಖಾನ್ ಪೌರಾಡಳಿತ ಮತ್ತು ಹಜ್ ಖಾತೆ ಸಚಿವರು ಕರ್ನಾಟಕ ಸರ್ಕಾರ
ಎನ್ ಎಸ್ ಬೋಸರಾಜ್ ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರು ಕರ್ನಾಟಕ ಸರ್ಕಾರ ಮಾನಪ್ಪ ಡಿ ವಜ್ಜಲ್ ಶಾಸಕರು ಲಿಂಗಸ್ಗೂರು ಆಗಮಿಸಲಿದ್ದು, ಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ, ಅಧ್ಯಕ್ಷರಾದ ಸಂಧಾನಿ ಎಂಡಿ, ಉಪಾಧ್ಯಕ್ಷರು ಸರ್ವ ಸದಸ್ಯರೊಂದಿಗೆ ಉದ್ಘಾಟನೆ ಗೊಳ್ಳಲಿದೆ
ಇಂದಿರಾ ಕ್ಯಾಂಟೀನ್ ನಿಂದ ಬಡ ವರ್ಗದ ಜನರಿಗೆ ಕಡಿಮೆ ದುಡ್ಡಿನಲ್ಲಿ ಹೊಟ್ಟೆ ತುಂಬಿಸುವ ಕೇಂದ್ರವಾಗಲಿದೆ.
ವರದಿ: ಶ್ರೀನಿವಾಸ ಮಧುಶ್ರೀ